<p><strong>ಮುಂಬೈ: </strong>ವಕ್ಫ್ ಆಸ್ತಿಯನ್ನು ಅಕ್ರಮವಾಗಿ ಮಾರಾಟ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿ ಜಾರಿ ನಿರ್ದೆಶನಾಲಯವು ಮಹಾರಾಷ್ಟ್ರದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ನವಾಬ್ ಮಲಿಕ್ ಅವರಿಗೆ ಸೇರಿದ ಜಾಗಗಳ ಮೇಲೆ ದಾಳಿ ನಡೆಸಿದೆ.</p>.<p>ಈ ಕುರಿತಂತೆ ಪ್ರತಿಕ್ರಿಯಿಸಿರುವ ನವಾಬ್ ಮಲಿಕ್, ಕೇಂದ್ರದ ತನಿಖಾ ಸಂಸ್ಥೆಯು ಈ ದಾಳಿಗಳ ಮೂಲಕ ನನ್ನನ್ನು ಬೆದರಿಸಬಹುದು ಎಂಬ ತಪ್ಪು ಕಲ್ಪನೆಯಲ್ಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.</p>.<p>ಮಹಾರಾಷ್ಟ್ರದ ವಕ್ಫ್ ಮಂಡಳಿಯ 30,000 ಘಟಕಗಳ ಮೇಲಿನ ತನಿಖೆಯನ್ನು ನಾನು ಸ್ವಾಗತಿಸುತ್ತೇನೆ. ವಕ್ಫ್ ಮಂಡಳಿಯು ಜಾರಿ ನಿರ್ದೆಶನಾಲಯದ ತನಿಖೆಗೆ ಬೇಕಾದ ಸಹಕಾರ ನೀಡಲಿದೆ ಎಂದಿದ್ದಾರೆ.</p>.<p>ಇದೇವೇಳೆ, ಲಖನೌದ ಶಿಯಾ ವಕ್ಫ್ ಮಂಡಳಿಯು ನೀಡಿರುವ ದೂರುಗಳ ತನಿಖೆಯನ್ನೂ ಇ.ಡಿ ನಡೆಸಲಿ ಎಂದಿದ್ದಾರೆ. ಈ ತರಹದ ದಾಳಿಗಳಿಂದಾಗಿ ನಾನು ಭಯಭೀತನಾಗುತ್ತೇನೆ ಎಂದು ಇ.ಡಿ ಅಧಿಕಾರಿಗಳು ಅಂದುಕೊಂಡಿದ್ದರೆ ಅದು ಅವರ ತಪ್ಪುಕಲ್ಪನೆ ಎಂದು ಅವರು ಹೇಳಿದ್ದಾರೆ. ನನ್ನ ವ್ಯವಹಾರಗಳ ದಾಖಲೆ ಜೊತೆ ಬಿಜೆಪಿ ಮುಖಂಡರ ದಾಖಲೆಗಳನ್ನೂ ಕಳುಹಿಸುತ್ತೇನೆ. ಇ.ಡಿ ಅವರ ಬಗ್ಗೆಯೂ ತನಿಖೆ ಮಾಡಲಿ ಎಂದಿದ್ದಾರೆ.</p>.<p>ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಪುಣೆ ಮತ್ತು ಸುತ್ತಲಿನ ಪ್ರದೇಶದಲ್ಲಿ ನವಾಬ್ ಮಲಿಕ್ ಅವರಿಗೆ ಸೇರಿದ ಜಾಗಗಳ ಮೇಲೆ ಇಂದು ಬೆಳಗ್ಗೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ವಕ್ಫ್ ಆಸ್ತಿಯನ್ನು ಅಕ್ರಮವಾಗಿ ಮಾರಾಟ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿ ಜಾರಿ ನಿರ್ದೆಶನಾಲಯವು ಮಹಾರಾಷ್ಟ್ರದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ನವಾಬ್ ಮಲಿಕ್ ಅವರಿಗೆ ಸೇರಿದ ಜಾಗಗಳ ಮೇಲೆ ದಾಳಿ ನಡೆಸಿದೆ.</p>.<p>ಈ ಕುರಿತಂತೆ ಪ್ರತಿಕ್ರಿಯಿಸಿರುವ ನವಾಬ್ ಮಲಿಕ್, ಕೇಂದ್ರದ ತನಿಖಾ ಸಂಸ್ಥೆಯು ಈ ದಾಳಿಗಳ ಮೂಲಕ ನನ್ನನ್ನು ಬೆದರಿಸಬಹುದು ಎಂಬ ತಪ್ಪು ಕಲ್ಪನೆಯಲ್ಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.</p>.<p>ಮಹಾರಾಷ್ಟ್ರದ ವಕ್ಫ್ ಮಂಡಳಿಯ 30,000 ಘಟಕಗಳ ಮೇಲಿನ ತನಿಖೆಯನ್ನು ನಾನು ಸ್ವಾಗತಿಸುತ್ತೇನೆ. ವಕ್ಫ್ ಮಂಡಳಿಯು ಜಾರಿ ನಿರ್ದೆಶನಾಲಯದ ತನಿಖೆಗೆ ಬೇಕಾದ ಸಹಕಾರ ನೀಡಲಿದೆ ಎಂದಿದ್ದಾರೆ.</p>.<p>ಇದೇವೇಳೆ, ಲಖನೌದ ಶಿಯಾ ವಕ್ಫ್ ಮಂಡಳಿಯು ನೀಡಿರುವ ದೂರುಗಳ ತನಿಖೆಯನ್ನೂ ಇ.ಡಿ ನಡೆಸಲಿ ಎಂದಿದ್ದಾರೆ. ಈ ತರಹದ ದಾಳಿಗಳಿಂದಾಗಿ ನಾನು ಭಯಭೀತನಾಗುತ್ತೇನೆ ಎಂದು ಇ.ಡಿ ಅಧಿಕಾರಿಗಳು ಅಂದುಕೊಂಡಿದ್ದರೆ ಅದು ಅವರ ತಪ್ಪುಕಲ್ಪನೆ ಎಂದು ಅವರು ಹೇಳಿದ್ದಾರೆ. ನನ್ನ ವ್ಯವಹಾರಗಳ ದಾಖಲೆ ಜೊತೆ ಬಿಜೆಪಿ ಮುಖಂಡರ ದಾಖಲೆಗಳನ್ನೂ ಕಳುಹಿಸುತ್ತೇನೆ. ಇ.ಡಿ ಅವರ ಬಗ್ಗೆಯೂ ತನಿಖೆ ಮಾಡಲಿ ಎಂದಿದ್ದಾರೆ.</p>.<p>ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಪುಣೆ ಮತ್ತು ಸುತ್ತಲಿನ ಪ್ರದೇಶದಲ್ಲಿ ನವಾಬ್ ಮಲಿಕ್ ಅವರಿಗೆ ಸೇರಿದ ಜಾಗಗಳ ಮೇಲೆ ಇಂದು ಬೆಳಗ್ಗೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>