ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಸರ ಸಂರಕ್ಷಣೆ ಕುರಿತ ಮೋದಿ ಭರವಸೆಗೆ ಜೈರಾಮ್‌ ರಮೇಶ್‌ ವ್ಯಂಗ್ಯ

Last Updated 2 ನವೆಂಬರ್ 2021, 10:42 IST
ಅಕ್ಷರ ಗಾತ್ರ

ಬೆಂಗಳೂರು: ‘2070ರ ವೇಳೆಗೆ ಭಾರತವನ್ನು ಇಂಗಾಲ ಹೊರಸೂಸುವಿಕೆಯಿಂದ ಮುಕ್ತಗೊಳಿಸಲಾಗುವುದು’ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಭರವಸೆಯನ್ನು ರಾಜ್ಯಸಭಾ ಸದಸ್ಯ ಜೈರಾಮ್‌ ರಮೇಶ್‌ ವ್ಯಂಗ್ಯ ಮಾಡಿದ್ದಾರೆ.

ಗ್ಲಾಸ್ಗೋದಲ್ಲಿ ನಡೆಯುತ್ತಿರುವ ‘ಸಿಒಪಿ26 ಹವಾಮಾನ ಶೃಂಗಸಭೆ‘ಯಲ್ಲಿ ಸೋಮವಾರ ಮಾತನಾಡಿದ್ದ ಪ್ರಧಾನಿ ಮೋದಿ, ‘ಹವಾಮಾನ ಬದಲಾವಣೆ ತಡೆಗೆ ಸಂಬಂಧಿಸಿ ಪ್ಯಾರಿಸ್‌ ಒಪ್ಪಂದಲ್ಲಿ ಉಲ್ಲೇಖಿಸಿರುವ ಸೂತ್ರಗಳನ್ನು ಅಕ್ಷರಶಃ ಕಾರ್ಯರೂಪಕ್ಕೆ ತರುತ್ತಿರುವ ಏಕೈಕ ದೇಶವೆಂದರೆ ಭಾರತ’ ಎಂದು ಪ್ರತಿಪಾದಿಸಿದ್ದರು. ಅಲ್ಲದೆ, 2070ರ ವೇಳೆಗೆ ಭಾರತವನ್ನು ಇಂಗಾಲ ಹೊರಸೂಸುವಿಕೆಯಿಂದ ಮುಕ್ತಗೊಳಿಸಲಾಗುವುದು ಎಂದು ಹೇಳಿದ್ದರು.

ಮೋದಿ ಅವರ ಭರವಸೆಗಳನ್ನು ಜೈರಾಮ್‌ ರಮೇಶ್‌ ತಮ್ಮ ಟ್ವೀಟ್ ಮೂಲಕ ಪ್ರಶ್ನಿಸಿ ವ್ಯಂಗ್ಯವಾಡಿದ್ದಾರೆ.

‘ಗ್ಲಾಸ್ಗೋದಲ್ಲಿನ ಪ್ರಧಾನಿ ಮೋದಿ ಅವರ ಬೃಹತ್‌ ಘೋಷಣೆಗಳು ಒಂದು ವಿಷಯವಷ್ಟೆ. ಭಾರತದಲ್ಲಿ ಅದಕ್ಕೆ ಸಂಬಂಧಿಸಿದ ಕ್ರಮಗಳೇನು? ಪರಿಸರ ಮತ್ತು ಅರಣ್ಯಕ್ಕೆ ಸಂಬಂಧಿಸಿದ ಕಾನೂನುಗಳನ್ನು ದುರ್ಬಲಗೊಳಿಸಲಾಗುತ್ತಿದೆ, ಮಾನದಂಡಗಳನ್ನು ಸಡಿಲಗೊಳಿಸಲಾಗುತ್ತಿದೆ ಮತ್ತು ಜಾರಿ ಸಂಸ್ಥೆಗಳನ್ನು ದುರ್ಬಲಗೊಳಿಸಲಾಗುತ್ತಿದೆ, ಇದು ವಾಸ್ತವ. ಅತ್ಯಂತ ದೂರದ 2070ಕ್ಕೆ ಇದು ದೊಡ್ಡ ಭರವಸೆಯಲ್ಲ,’ ಎಂದು ಅವರು ಹೇಳಿದ್ದಾರೆ.

‘ಹವಾಮಾನ ಬದಲಾವಣೆಯಿಂದ ಪರಿಸರದ ಮೇಲೆ ಆಗುತ್ತಿರುವ ಪರಿಣಾಮಗಳ ವಿರುದ್ಧ ಭಾರತ ದೃಢವಾದ ಹೋರಾಟ ಕೈಗೊಂಡಿದೆ. ಈ ಹೋರಾಟದ ಫಲಿತಾಂಶವನ್ನು ಜಗತ್ತಿಗೆ ಭಾರತ ತೋರಿಸುವುದು’ ಎಂದು ಮೋದಿ ಗ್ಲಾಸ್ಗೋದಲ್ಲಿ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT