<p><strong>ದಿನ್ಹಟಾ (ಪಶ್ಚಿಮ ಬಂಗಾಳ)</strong>: ‘ನಂದಿಗ್ರಾಮ ಕ್ಷೇತ್ರದಿಂದಲೇ ಸ್ಪರ್ಧಿಸಿದ್ದೇನೆ. ಆ ಕ್ಷೇತ್ರದಿಂದಲೇ ಗೆಲ್ಲುತ್ತೇನೆ‘ ಎಂದು ಪ್ರತಿಪಾದಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ‘ಇನ್ನೊಂದು ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬ ನಿಮ್ಮ ಸಲಹೆ ನನಗೆ ಅಗತ್ಯವಿಲ್ಲ‘ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.</p>.<p>‘ಮಮತಾ ಬ್ಯಾನರ್ಜಿ ನಂದಿಗ್ರಾಮದಲ್ಲಿ ಸೋಲುವ ಸಾಧ್ಯತೆ ಇದೆ. ಹಾಗಾಗಿ ದೀದಿ ಮತ್ತೊಂದು ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಚಿಂತನೆ ನಡೆಸುತ್ತಿದ್ದಾರಂತೆ‘ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಉಲುಬೇರಿಯಾದ ರ್ಯಾಲಿಯಲ್ಲಿ ನೀಡಿದ್ದ ಹೇಳಿಕೆಗೆ, ಮಮತಾ ಬ್ಯಾನರ್ಜಿ ಹೀಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.</p>.<p>ಉತ್ತರ ಬಂಗಾಳ ಜಿಲ್ಲೆಯ ಕೂಚ್ಬೆಹಾರ್ನ ದಿನ್ಹಾಟಾದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ‘ಮೊದಲು ನಿಮ್ಮ ಗೃಹಸಚಿವರನ್ನು ನಿಯಂತ್ರಿಸಿ, ಆ ನಂತರ ನಮ್ಮನ್ನು ನಿಯಂತ್ರಿಸಲು ಪ್ರಯತ್ನಿಸುವಿರಂತೆ. ನಮ್ಮನ್ನು ನಿಯಂತ್ರಿಸುವುದಕ್ಕೆ, ನಾವೇನು ನಿಮ್ಮ ಪಕ್ಷದ ಸದಸ್ಯರಲ್ಲ‘ ಎಂದು ಮಮತಾ ಕಟುವಾಗಿ ಟೀಕಿಸಿದರು.</p>.<p>‘ಈ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿಲ್ಲ. ಗೃಹ ಸಚಿವ ಅಮಿತ್ ಶಾ ನಡೆಸುತ್ತಿದ್ದಾರೆ. ಮತದಾರರನ್ನು ಬೆದರಿಸಲು ಕೇಂದ್ರ ಪಡೆಗಳನ್ನು ಬಳಸಲಾಗುತ್ತಿದೆ‘ ಎಂದು ಅವರು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಿನ್ಹಟಾ (ಪಶ್ಚಿಮ ಬಂಗಾಳ)</strong>: ‘ನಂದಿಗ್ರಾಮ ಕ್ಷೇತ್ರದಿಂದಲೇ ಸ್ಪರ್ಧಿಸಿದ್ದೇನೆ. ಆ ಕ್ಷೇತ್ರದಿಂದಲೇ ಗೆಲ್ಲುತ್ತೇನೆ‘ ಎಂದು ಪ್ರತಿಪಾದಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ‘ಇನ್ನೊಂದು ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬ ನಿಮ್ಮ ಸಲಹೆ ನನಗೆ ಅಗತ್ಯವಿಲ್ಲ‘ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.</p>.<p>‘ಮಮತಾ ಬ್ಯಾನರ್ಜಿ ನಂದಿಗ್ರಾಮದಲ್ಲಿ ಸೋಲುವ ಸಾಧ್ಯತೆ ಇದೆ. ಹಾಗಾಗಿ ದೀದಿ ಮತ್ತೊಂದು ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಚಿಂತನೆ ನಡೆಸುತ್ತಿದ್ದಾರಂತೆ‘ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಉಲುಬೇರಿಯಾದ ರ್ಯಾಲಿಯಲ್ಲಿ ನೀಡಿದ್ದ ಹೇಳಿಕೆಗೆ, ಮಮತಾ ಬ್ಯಾನರ್ಜಿ ಹೀಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.</p>.<p>ಉತ್ತರ ಬಂಗಾಳ ಜಿಲ್ಲೆಯ ಕೂಚ್ಬೆಹಾರ್ನ ದಿನ್ಹಾಟಾದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ‘ಮೊದಲು ನಿಮ್ಮ ಗೃಹಸಚಿವರನ್ನು ನಿಯಂತ್ರಿಸಿ, ಆ ನಂತರ ನಮ್ಮನ್ನು ನಿಯಂತ್ರಿಸಲು ಪ್ರಯತ್ನಿಸುವಿರಂತೆ. ನಮ್ಮನ್ನು ನಿಯಂತ್ರಿಸುವುದಕ್ಕೆ, ನಾವೇನು ನಿಮ್ಮ ಪಕ್ಷದ ಸದಸ್ಯರಲ್ಲ‘ ಎಂದು ಮಮತಾ ಕಟುವಾಗಿ ಟೀಕಿಸಿದರು.</p>.<p>‘ಈ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿಲ್ಲ. ಗೃಹ ಸಚಿವ ಅಮಿತ್ ಶಾ ನಡೆಸುತ್ತಿದ್ದಾರೆ. ಮತದಾರರನ್ನು ಬೆದರಿಸಲು ಕೇಂದ್ರ ಪಡೆಗಳನ್ನು ಬಳಸಲಾಗುತ್ತಿದೆ‘ ಎಂದು ಅವರು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>