<p><strong>ನವದೆಹಲಿ:</strong> ನೋಟು ರದ್ದತಿ, ಜಿಎಸ್ಟಿ ಜಾರಿಯಲ್ಲಿನ ಲೋಪ, ಲಾಕ್ಡೌನ್ನಂಥ ಕ್ರಮಗಳಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಆರ್ಥಿಕತೆಯನ್ನೇ ನಾಶ ಮಾಡಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟೀಕಿಸಿದ್ದಾರೆ.</p>.<p>ಪಕ್ಷದ ಯುವ ಘಟಕವು ಆರಂಭಿಸಿರುವ ‘ಉದ್ಯೊಗ ಕೊಡಿ’ ಆಂದೋಲನದ ಅಂಗವಾಗಿ ಭಾನುವಾರ ವಿಡಿಯೊ ಸಂದೇಶವನ್ನು ಅವರು ಟ್ವೀಟ್ ಮಾಡಿದ್ದಾರೆ.</p>.<p>‘ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ಪ್ರತಿ ವರ್ಷ ಎರಡು ಕೋಟಿ ಯುವಕರಿಗೆ ಉದ್ಯೋಗ ಒದಗಿಸುವುದಾಗಿ ಭರವಸೆ ನೀಡಿದರು. ಆದರೆ, ಅವರು ನುಡಿದಂತೆ ನಡೆಯಲೇ ಇಲ್ಲ. ಬದಲಾಗಿ ಅವರ ತಪ್ಪು ನೀತಿಗಳಿಂದಾಗಿ 14 ಕೋಟಿ ಜನರು ನಿರುದ್ಯೋಗಿಗಳಾಗಿದ್ದಾರೆ’ ಎಂದು ಟೀಕಿಸಿದ್ದಾರೆ.</p>.<p>‘ಕೇಂದ್ರ ಸರ್ಕಾರದ ತಪ್ಪು ನೀತಿಗಳಿಂದಾಗಿ ಆರ್ಥಿಕತೆಯೇ ಕುಸಿದಿದೆ. ಹೀಗಾಗಿ ದೇಶದ ಯುವ ಜನತೆಗಾಗಿ ಉದ್ಯೋಗ ಸೃಷ್ಟಿ ಸಾಧ್ಯವಾಗುವುದೇ ಇಲ್ಲ’ ಎಂದಿದ್ದಾರೆ.</p>.<p>‘ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಯುವ ಕಾಂಗ್ರೆಸ್ ಬೀದಿಗಿಳಿದು ಹೋರಾಟ ಆರಂಭಿಸಿರುವುದು ಸಂತಸ ತಂದಿದೆ. ನಿರುದ್ಯೋಗ, ಆರ್ಥಿಕ ಸಂಕಷ್ಟದಂತಹ ವಿಷಯಗಳನ್ನು ಜನರಿಗೆ ತಿಳಿಸಲು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿ ಊರಿನಲ್ಲಿಯೂ ಆಂದೋಲನವನ್ನು ಹಮ್ಮಿಕೊಳ್ಳುವರು’ ಎಂದೂ ಹೇಳಿದ್ದಾರೆ.</p>.<p>ಬೆಂಬಲ: ಯುವ ಕಾಂಗ್ರೆಸ್ ಆರಂಭಿಸಿರುವ ಈ ಆಂದೋಲನಕ್ಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂದಿ ವಾದ್ರಾ ಸಹ ಬೆಂಬಲ ಸೂಚಿಸಿದ್ದು, ಯುವಕರ ಶಕ್ತಿಯೇ ಭಾರತದ ಶಕ್ತಿ ಎಂದು ಬಣ್ಣಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ನೋಟು ರದ್ದತಿ, ಜಿಎಸ್ಟಿ ಜಾರಿಯಲ್ಲಿನ ಲೋಪ, ಲಾಕ್ಡೌನ್ನಂಥ ಕ್ರಮಗಳಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಆರ್ಥಿಕತೆಯನ್ನೇ ನಾಶ ಮಾಡಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟೀಕಿಸಿದ್ದಾರೆ.</p>.<p>ಪಕ್ಷದ ಯುವ ಘಟಕವು ಆರಂಭಿಸಿರುವ ‘ಉದ್ಯೊಗ ಕೊಡಿ’ ಆಂದೋಲನದ ಅಂಗವಾಗಿ ಭಾನುವಾರ ವಿಡಿಯೊ ಸಂದೇಶವನ್ನು ಅವರು ಟ್ವೀಟ್ ಮಾಡಿದ್ದಾರೆ.</p>.<p>‘ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ಪ್ರತಿ ವರ್ಷ ಎರಡು ಕೋಟಿ ಯುವಕರಿಗೆ ಉದ್ಯೋಗ ಒದಗಿಸುವುದಾಗಿ ಭರವಸೆ ನೀಡಿದರು. ಆದರೆ, ಅವರು ನುಡಿದಂತೆ ನಡೆಯಲೇ ಇಲ್ಲ. ಬದಲಾಗಿ ಅವರ ತಪ್ಪು ನೀತಿಗಳಿಂದಾಗಿ 14 ಕೋಟಿ ಜನರು ನಿರುದ್ಯೋಗಿಗಳಾಗಿದ್ದಾರೆ’ ಎಂದು ಟೀಕಿಸಿದ್ದಾರೆ.</p>.<p>‘ಕೇಂದ್ರ ಸರ್ಕಾರದ ತಪ್ಪು ನೀತಿಗಳಿಂದಾಗಿ ಆರ್ಥಿಕತೆಯೇ ಕುಸಿದಿದೆ. ಹೀಗಾಗಿ ದೇಶದ ಯುವ ಜನತೆಗಾಗಿ ಉದ್ಯೋಗ ಸೃಷ್ಟಿ ಸಾಧ್ಯವಾಗುವುದೇ ಇಲ್ಲ’ ಎಂದಿದ್ದಾರೆ.</p>.<p>‘ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಯುವ ಕಾಂಗ್ರೆಸ್ ಬೀದಿಗಿಳಿದು ಹೋರಾಟ ಆರಂಭಿಸಿರುವುದು ಸಂತಸ ತಂದಿದೆ. ನಿರುದ್ಯೋಗ, ಆರ್ಥಿಕ ಸಂಕಷ್ಟದಂತಹ ವಿಷಯಗಳನ್ನು ಜನರಿಗೆ ತಿಳಿಸಲು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿ ಊರಿನಲ್ಲಿಯೂ ಆಂದೋಲನವನ್ನು ಹಮ್ಮಿಕೊಳ್ಳುವರು’ ಎಂದೂ ಹೇಳಿದ್ದಾರೆ.</p>.<p>ಬೆಂಬಲ: ಯುವ ಕಾಂಗ್ರೆಸ್ ಆರಂಭಿಸಿರುವ ಈ ಆಂದೋಲನಕ್ಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂದಿ ವಾದ್ರಾ ಸಹ ಬೆಂಬಲ ಸೂಚಿಸಿದ್ದು, ಯುವಕರ ಶಕ್ತಿಯೇ ಭಾರತದ ಶಕ್ತಿ ಎಂದು ಬಣ್ಣಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>