1970ರ ದಶಕದಲ್ಲಿ ಪಾಲಕ್ಕಾಡ್ ಜಿಲ್ಲೆಯ ಸೈಲೆಂಟ್ ವ್ಯಾಲಿಯಲ್ಲಿ ಜಲವಿದ್ಯುತ್ ಯೋಜನೆಯನ್ನು ಸ್ಥಾಪಿಸುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧದ ರಾಷ್ಟ್ರೀಯ ಚಳವಳಿಯಲ್ಲಿ ಪ್ರಸಾದ್ ಪ್ರಮುಖ ಪಾತ್ರ ವಹಿಸಿದ್ದರು. ಪರಿಸರವಾದಿಗಳ ನಿರಂತರ ಒತ್ತಡಕ್ಕೆ ಮಣಿದ ಸರ್ಕಾರ ಯೋಜನೆಯನ್ನು ಕೈಬಿಟ್ಟಿತ್ತು. ಸೈಲೆಂಟ್ ವ್ಯಾಲಿ ಅರಣ್ಯಗಳನ್ನು ಸಂರಕ್ಷಿಸಲಾಗುವುದು ಎಂದು ಅಂದಿನ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಭರವಸೆ ನೀಡಿದ ನಂತರ 80 ರ ದಶಕದ ಆರಂಭದಲ್ಲಿ ಹೋರಾಟವನ್ನು ಹಿಂತೆಗೆದುಕೊಳ್ಳಲಾಗಿತ್ತು.