'ಆಧುನಿಕ ಚಿಕಿತ್ಸಾ ಪದ್ಧತಿಯನ್ನು ಗುರಿಯಾಗಿಸಿಕೊಂಡು ಟೀಕೆ ಮಾಡುತ್ತಿರುವ ರಾಮದೇವ್ ವಾಸ್ತವವಾಗಿ ಸರ್ಕಾರವನ್ನು ಪ್ರಶ್ನಿಸುತ್ತಿದ್ದಾರೆ. ಬಾಬಾ ರಾಮದೇವ್ ವಿರುದ್ಧ ನಮಗೆ ವೈಯಕ್ತಿಕ ದ್ವೇಷವಿಲ್ಲ. ಅವರ ಹೇಳಿಕೆಗಳು ಕೋವಿಡ್ ಲಸಿಕೆ ಅಭಿಯಾನಕ್ಕೆ ವಿರುದ್ಧವಾಗಿವೆ. ಅವರ ಹೇಳಿಕೆಗಳು ಜನರನ್ನು ಗೊಂದಲಕ್ಕೀಡುಮಾಡಬಹುದು, ಜನರ ದಿಕ್ಕುತಪ್ಪಿಸಬಹುದು ಎಂದು ನಾವು ಭಾವಿಸುತ್ತೇವೆ. ಅವರಿಗೆ ಅನುಯಾಯಿಗಳು ಇರುವುದೂ ನಮಗೆ ಆತಂಕ ಮೂಡಿಸಿದೆ' ಎಂದು ಡಾ ಜಯಲಾಲ್ ಹೇಳಿದರು.