ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮದೇವ್‌ ಮೇಲೆ ದ್ವೇಷವಿಲ್ಲ, ಮಾತು ಹಿಂಪಡೆದರೆ ಕೇಸ್‌ ವಾಪಸ್: ಐಎಂಎ ಮುಖ್ಯಸ್ಥ

Last Updated 28 ಮೇ 2021, 13:56 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್-19 ಲಸಿಕೆ ಮತ್ತು ಆಧುನಿಕ ಔಷಧ ಪದ್ಧತಿಯ ವಿರುದ್ಧದ ತಮ್ಮ ಹೇಳಿಕೆಗಳನ್ನು ಯೋಗ ಗುರು ಬಾಬಾ ರಾಮದೇವ್‌ ಅವರು ಹಿಂದಕ್ಕೆ ಪಡೆದರೆ, ಅವರ ವಿರುದ್ಧ ಪೊಲೀಸರಿಗೆ ನೀಡಲಾಗಿರುವ ದೂರುಗಳನ್ನು ಹಿಂಪಡೆಯುವ ಬಗ್ಗೆ ಚಿಂತಿಸಲಾಗುವುದು ಭಾರತೀಯ ಎಂದು ವೈದ್ಯಕೀಯ ಸಂಘ (ಐಎಂಎ) ರಾಷ್ಟ್ರೀಯ ಮುಖ್ಯಸ್ಥ ಡಾ.ಜೆ.ಜಯಲಾಲ್ ಶುಕ್ರವಾರ ತಿಳಿಸಿದ್ದಾರೆ.

'ಆಧುನಿಕ ಚಿಕಿತ್ಸಾ ಪದ್ಧತಿಯನ್ನು ಗುರಿಯಾಗಿಸಿಕೊಂಡು ಟೀಕೆ ಮಾಡುತ್ತಿರುವ ರಾಮದೇವ್ ವಾಸ್ತವವಾಗಿ ಸರ್ಕಾರವನ್ನು ಪ್ರಶ್ನಿಸುತ್ತಿದ್ದಾರೆ. ಬಾಬಾ ರಾಮದೇವ್ ವಿರುದ್ಧ ನಮಗೆ ವೈಯಕ್ತಿಕ ದ್ವೇಷವಿಲ್ಲ. ಅವರ ಹೇಳಿಕೆಗಳು ಕೋವಿಡ್‌ ಲಸಿಕೆ ಅಭಿಯಾನಕ್ಕೆ ವಿರುದ್ಧವಾಗಿವೆ. ಅವರ ಹೇಳಿಕೆಗಳು ಜನರನ್ನು ಗೊಂದಲಕ್ಕೀಡುಮಾಡಬಹುದು, ಜನರ ದಿಕ್ಕುತಪ್ಪಿಸಬಹುದು ಎಂದು ನಾವು ಭಾವಿಸುತ್ತೇವೆ. ಅವರಿಗೆ ಅನುಯಾಯಿಗಳು ಇರುವುದೂ ನಮಗೆ ಆತಂಕ ಮೂಡಿಸಿದೆ' ಎಂದು ಡಾ ಜಯಲಾಲ್ ಹೇಳಿದರು.

ತಮ್ಮ ಹೇಳಿಕೆಗಳನ್ನು ಅವರು ಸಂಪೂರ್ಣವಾಗಿ ಹಿಂತೆಗೆದುಕೊಳ್ಳಲು ಮುಂದಾದರೆ, ಪೊಲೀಸ್ ಠಾಣೆಗಳಲ್ಲಿ ಅವರ ವಿರುದ್ಧ ದಾಖಲಾಗಿರುವ ದೂರುಗಳನ್ನು ಹಿಂಪಡೆಯಲು ಮತ್ತು ಅವರಿಗೆ ಕಳುಹಿಸಿರುವ ಮಾನನಷ್ಟ ಮೊಕದ್ದಮೆಯ ನೋಟಿಸ್ ಹಿಂಪಡೆಯಲು ಚಿಂತಿಸಲಾಗುವುದು ಎಂದು ಜಯಲಾಲ್‌ ಅವರು ತಿಳಿಸಿದ್ದಾರೆ.

ವೈದ್ಯರು, ಆಧುನಿಕ ವೈದ್ಯಕೀಯ ಪದ್ಧತಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಐಎಂಎ ಕೆಲವು ದಿನಗಳ ಹಿಂದೆ ರಾಮದೇವ್‌ಗೆ ಮಾನನಷ್ಟ ಮೊಕದ್ದಮೆಯ ನೋಟಿಸ್‌ ನೀಡಿತ್ತು. 15 ದಿನಗಳಲ್ಲಿ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT