<p><strong>ಮುಂಬೈ:</strong> ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ, ನಟಿ ಕಂಗನಾ ರನೌತ್ ವಿರುದ್ಧದ ಹಕ್ಕುಚ್ಯುತಿ ನೋಟಿಸ್ಗೆ ಸಂಬಂಧಿಸಿದಂತೆ ಹಕ್ಕುಬಾಧ್ಯತಾ ಸಮಿತಿಗೆ ವರದಿ ಸಲ್ಲಿಸಲು ನೀಡಿದ್ದ ಅವಧಿಯನ್ನು ಮಹಾರಾಷ್ಟ್ರ ವಿಧಾನಸಭೆ ಮಂಗಳವಾರ ವಿಸ್ತರಿಸಿದೆ.</p>.<p>ವಿಧಾನಸಭೆಯ ಮುಂದಿನ ಅಧಿವೇಶನದ ಕೊನೆಯ ದಿನದ ವರೆಗೆ ಈ ಅವಧಿಯನ್ನು ವಿಸ್ತರಿಸಲಾಗಿದೆ.</p>.<p>ಶಿವಸೇನಾ ಶಾಸಕ ಪ್ರತಾಪ್ ಸರ್ನಾಯಕ ಅವರು ಗೋಸ್ವಾಮಿ ಹಾಗೂ ಕಂಗನಾ ವಿರುದ್ಧದ ಹಕ್ಕುಚ್ಯುತಿ ನೋಟಿಸ್ಗಳನ್ನು ವಿಧಾನಸಭೆ ಸ್ಪೀಕರ್ ಕಚೇರಿಗೆ ಸೆ.7ರಂದು ಸಲ್ಲಿಸಿದ್ದರು.</p>.<p>ನಟಿ ಕಂಗನಾ ಮುಂಬೈಯನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿ ಟ್ವೀಟ್ ಮಾಡಿದ್ದರು. ಈ ಕಾರಣಕ್ಕಾಗಿ ಶಾಸಕ ಸರ್ನಾಯಕ ಹಾಗೂ ಕಂಗನಾ ಪರಸ್ಪರರ ವಿರುದ್ಧ ಟೀಕೆಗಳನ್ನು ಮಾಡಿದ್ದರು.</p>.<p>2018ರಲ್ಲಿ ವ್ಯಕ್ತಿಯೊಬ್ಬರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ನಬ್ ಗೋಸ್ವಾಮಿ ವಿರುದ್ಧ ಆರೋಪ ಇತ್ತು. ಈ ಪ್ರಕರಣ ಕುರಿತಂತೆ ಮರು ತನಿಖೆ ನಡೆಸುವಂತೆ ಸರ್ನಾಯಕ ಒತ್ತಾಯಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಗೋಸ್ವಾಮಿ, ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ, ನಟಿ ಕಂಗನಾ ರನೌತ್ ವಿರುದ್ಧದ ಹಕ್ಕುಚ್ಯುತಿ ನೋಟಿಸ್ಗೆ ಸಂಬಂಧಿಸಿದಂತೆ ಹಕ್ಕುಬಾಧ್ಯತಾ ಸಮಿತಿಗೆ ವರದಿ ಸಲ್ಲಿಸಲು ನೀಡಿದ್ದ ಅವಧಿಯನ್ನು ಮಹಾರಾಷ್ಟ್ರ ವಿಧಾನಸಭೆ ಮಂಗಳವಾರ ವಿಸ್ತರಿಸಿದೆ.</p>.<p>ವಿಧಾನಸಭೆಯ ಮುಂದಿನ ಅಧಿವೇಶನದ ಕೊನೆಯ ದಿನದ ವರೆಗೆ ಈ ಅವಧಿಯನ್ನು ವಿಸ್ತರಿಸಲಾಗಿದೆ.</p>.<p>ಶಿವಸೇನಾ ಶಾಸಕ ಪ್ರತಾಪ್ ಸರ್ನಾಯಕ ಅವರು ಗೋಸ್ವಾಮಿ ಹಾಗೂ ಕಂಗನಾ ವಿರುದ್ಧದ ಹಕ್ಕುಚ್ಯುತಿ ನೋಟಿಸ್ಗಳನ್ನು ವಿಧಾನಸಭೆ ಸ್ಪೀಕರ್ ಕಚೇರಿಗೆ ಸೆ.7ರಂದು ಸಲ್ಲಿಸಿದ್ದರು.</p>.<p>ನಟಿ ಕಂಗನಾ ಮುಂಬೈಯನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿ ಟ್ವೀಟ್ ಮಾಡಿದ್ದರು. ಈ ಕಾರಣಕ್ಕಾಗಿ ಶಾಸಕ ಸರ್ನಾಯಕ ಹಾಗೂ ಕಂಗನಾ ಪರಸ್ಪರರ ವಿರುದ್ಧ ಟೀಕೆಗಳನ್ನು ಮಾಡಿದ್ದರು.</p>.<p>2018ರಲ್ಲಿ ವ್ಯಕ್ತಿಯೊಬ್ಬರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ನಬ್ ಗೋಸ್ವಾಮಿ ವಿರುದ್ಧ ಆರೋಪ ಇತ್ತು. ಈ ಪ್ರಕರಣ ಕುರಿತಂತೆ ಮರು ತನಿಖೆ ನಡೆಸುವಂತೆ ಸರ್ನಾಯಕ ಒತ್ತಾಯಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಗೋಸ್ವಾಮಿ, ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>