ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ| ಕುಖ್ಯಾತ ಕ್ರಿಮಿನಲ್‌ ಎನ್‌ಕೌಂಟರ್‌

Last Updated 16 ಮಾರ್ಚ್ 2023, 10:02 IST
ಅಕ್ಷರ ಗಾತ್ರ

ಲಖನೌ: ಸಾತ್ನಾ ಪೊಲೀಸರೊಂದಿಗೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮಧ್ಯಪ್ರದೇಶದ ಕುಖ್ಯಾತ ಕ್ರಿಮಿನಲ್‌ ಒಬ್ಬನನ್ನು ಎನ್‌ಕೌಂಟರ್‌ ಮಾಡಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಗುರುವಾರ ತಿಳಿಸಿದ್ದಾರೆ.

ಮೃತ ಆರೋಪಿ ಆನಂದ್‌ ಸಾಗರ್‌ ಸುಭಾಷ್‌ ಯಾದವ್‌ ಗುಂಪಿನ ಸದಸ್ಯನಾಗಿದ್ದು, ಜೋನಪುರ್, ಅಜಂಗಢ, ವಾರಾಣಸಿ ಮತ್ತು ಮಧ್ಯ ಪ್ರದೇಶದ ಸಾತ್ನಾದಲ್ಲಿ ಗ್ಯಾಂಗ್‌ ಸಕ್ರಿಯವಾಗಿದೆ ಎಂದು ಪೊಲೀಸ್‌ ವರದಿ ತಿಳಿಸಿದೆ.

ಗುರುವಾರ ಬೆಳಗ್ಗೆ ಬಕ್ಷಾ ಪೊಲೀಸ್‌ ಠಾಣೆ ವ್ಯಾಪ್ತಿಗೆ ಒಳಪಡುವ ಅಲಿಗಂಜ್‌ ಮಾರುಕಟ್ಟೆ ಬಳಿಯ ಜೋನಪುರ್‌–ಲಖನೌ ರಸ್ತೆಯಲ್ಲಿ ಆರೋಪಿಯನ್ನು ಎನ್‌ಕೌಂಟರ್‌ ಮಾಡಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ.

ಆರೋಪಿಯು 10 ದಿನಗಳ ಹಿಂದೆ ಸಾತ್ನಾದಲ್ಲಿ ವ್ಯಕ್ತಿಯೊಬ್ಬನನ್ನು ಕೊಂದು 15 ಲಕ್ಷ ರೂಪಾಯಿ ಲೂಟಿ ಮಾಡಿ ಜೋನಪುರ್‌ಕ್ಕೆ ಪರಾರಿಯಾಗಿದ್ದು, ಪೊಲೀಸರು ಆರೋಪಿಗಾಗಿ ಹುಡುಕಾಟದಲ್ಲಿ ತೊಡಗಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಪಾಲ್ ಶರ್ಮಾ ತಿಳಿಸಿದ್ದಾರೆ.

ಆರೋಪಿ ಸಾಗರ್‌ ಅಡಗುತಾಣದ ಬಗ್ಗೆ ಸತ್ನಾ ಪೊಲೀಸರು ಜೋನಪುರ್ ಜಿಲ್ಲೆಯ ಉತ್ತರ ಪ್ರದೇಶದ ಪೊಲೀಸರಿಗೆ ಮಾಹಿತಿ ನೀಡಿದ ನಂತರ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಕೂಂಬಿಂಗ್‌ ಕಾರ್ಯಚರಣೆ ವೇಳೆ ಎನ್‌ಕೌಂಟರ್‌ ನಡೆದಿದೆ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಎನ್‌ಕೌಂಟರ್‌ ನಂತರ ಆರೋಪಿಯನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT