ತಿರುಪತಿಯಲ್ಲಿ ಭಾನುವಾರ ನಡೆದ ದಕ್ಷಿಣ ವಲಯ ಪರಿಷತ್ ಸಭೆಯಲ್ಲಿ ಮಾತನಾಡಿರುವ ಅಮಿತ್ ಶಾ, ‘ಭಾರತ ಸರ್ಕಾರವು ನವೆಂಬರ್ 15 ಅನ್ನು ‘ಬುಡಕಟ್ಟು ಜನರ ಗೌರವ ದಿನ’ವಾಗಿ ಆಚರಿಸಲು ನಿರ್ಧರಿಸಿದೆ. ಭಾರತದ ಸ್ವಾತಂತ್ರ್ಯ ಹೋರಾಟ ಮತ್ತು ರಾಷ್ಟ್ರೀಯ ಅಭಿವೃದ್ಧಿಗೆ ಬುಡಕಟ್ಟು ಸಮುದಾಯಗಳ ಕೊಡುಗೆಯನ್ನು ಎತ್ತಿ ಹಿಡಿಯಲು ಈ ದಿನವನ್ನು ಆಚರಿಸಲಾಗುವುದು,’ ಎಂದು ತಿಳಿಸಿದರು.