ಸುಮೇರು ಪೀಠದ ಶಂಕರಾಚಾರ್ಯ ಸ್ವಾಮಿ, ನರೇಂದ್ರಾನಂದ ಸರಸ್ವತಿ ಮತ್ತಿತರರು ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಮೂರು ನಿರ್ಣಯಗಳನ್ನು ಅಂಗೀಕರಿಸಲಾಯಿತು. ಭಾರತವನ್ನು 'ಹಿಂದೂ ರಾಷ್ಟ್ರ' ಎಂದು ಘೋಷಿಸುವುದು, ಹರಿದ್ವಾರ ಧರ್ಮ ಸಂಸತ್ನಲ್ಲಿ ಧ್ವೇಷ ಭಾಷಣ ಮಾಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಜಿತೇಂದ್ರ ನಾರಾಯಣ್ ತ್ಯಾಗಿ ಅಲಿಯಾಸ್ ವಸೀಂ ರಿಜ್ವಿ ಅವರನ್ನು ಬಿಡುಗಡೆ ಮಾಡುವುದು, ಮತಾಂತರದಲ್ಲಿ ತೊಡಗಿರುವವರಿಗೆ ಮರಣದಂಡನೆ ವಿಧಿಸಬೇಕೆಂಬ ನಿರ್ಣಯ ಕೈಗೊಳ್ಳಲಾಯಿತು.