‘ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಅಂಗಡಿಗಳು, ವ್ಯಾಪಾರ ಕೇಂದ್ರಗಳು, ಸಾರ್ವಜನಿಕ ಸಾರಿಗೆ, ಸರ್ಕಾರಿ ಕಚೇರಿಗಳು, ಶೈಕ್ಷಣಿಕ ಮತ್ತು ಆರೋಗ್ಯ ಸಂಸ್ಥೆಗಳು ಇತ್ಯಾದಿಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಭಯೋತ್ಪಾದನೆ ಬಗ್ಗೆ ಸರ್ಕಾರ ನಿರ್ದಯ ನೀತಿ ಅಳವಡಿಸಿಕೊಂಡಿದೆ. ಭದ್ರತಾ ಉಪಕರಣಗಳ ಬಲಪಡಿಸುವಿಕೆ, ರಾಷ್ಟ್ರ ವಿರೋಧಿ ಶಕ್ತಿಗಳ ವಿರುದ್ಧ ಕಾನೂನನ್ನು ಕಟ್ಟುನಿಟ್ಟಾಗಿ ಜಾರಿ, ಭಯೋತ್ಪಾದಕ ಸಂಘಟನೆಗಳ ಸವಾಲುಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಗಸ್ತು ಮತ್ತು ಶೋಧ ಕಾರ್ಯಾಚರಣೆಗಳನ್ನು ತೀವ್ರಗೊಳಿಸಲಾಗಿದೆ’ ಎಂದು ಸಚಿವರು ತಮ್ಮ ಉತ್ತರದಲ್ಲಿ ತಿಳಿಸಿದ್ದಾರೆ.