2000ರಲ್ಲಿ 3,206 ಮಂದಿ ಕಿರಿಯ ಶಿಕ್ಷಕರನ್ನು ಅಕ್ರಮವಾಗಿ ನೇಮಕ ಮಾಡಿದ ಪ್ರಕರಣದಲ್ಲಿ ಓಂಪ್ರಕಾಶ್ ಚೌಟಾಲಾ, ಅವರ ಪುತ್ರ ಅಜಯ್ ಚೌಟಾಲಾ ಮತ್ತು ಐಎಎಸ್ ಅಧಿಕಾರಿ ಸಂಜೀವ್ ಕುಮಾರ್ ಸೇರಿ 53 ಮಂದಿ ಅಪರಾಧಿಗಳಾಗಿದ್ದು, ಇವರೆಲ್ಲರಿಗೂ ಸಿಬಿಐ ವಿಶೇಷ ನ್ಯಾಯಾಲಯವು 2013ರ ಜನವರಿಯಲ್ಲಿ ಜೈಲು ಶಿಕ್ಷೆ ವಿಧಿಸಿತ್ತು.