‘ಹೊಸದಾಗಿ ರಚಿಸಿರುವ ನ್ಯಾಯ ಮೂರ್ತಿ ಕೆ. ಭಕ್ತವತ್ಸಲ ನೇತೃತ್ವದ ಆಯೋಗದ ಮೂಲಕ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ವಿವಿಧ ಸಮುದಾಯಗಳ ರಾಜಕೀಯ ಹಿಂದುಳಿದಿರುವಿಕೆಯನ್ನು ಗುರುತಿಸಿ, ಮೀಸಲಾತಿ ನಿಗದಿಪಡಿಸಿ ಚುನಾವಣೆ ನಡೆಸಲು ಮೂರು ತಿಂಗಳು ಸಮಯಾವಕಾಶ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಸಭೆಯಲ್ಲಿ ನಿರ್ಧಾರಕ್ಕೆ ಬರಲಾಗಿದೆ. ಈ ಮನವಿಯನ್ನು ನ್ಯಾಯಾಲಯ ಒಪ್ಪದಿದ್ದರೆ, ಎಲ್ಲ ಸ್ಥಳೀಯ ಸಂಸ್ಥೆಗಳಿಗೂ ಹಿಂದಿನ ಚುನಾವಣೆಯನ್ನು ಆಧಾರವಾಗಿಟ್ಟುಕೊಂಡು ರೋಸ್ಟರ್ ಬದಲಿಸಿ ಮೀಸಲಾತಿ ಕಲ್ಪಿಸಿ ಚುನಾವಣೆ ನಡೆಸಲು ಅವಕಾಶ ಕೋರುವ ನಿರ್ಧಾರ ವನ್ನೂ ಮಾಡಲಾಯಿತು’ ಎಂದು ಮಾಧುಸ್ವಾಮಿ ಸುದ್ದಿಗಾರರಿಗೆ ತಿಳಿಸಿದರು.