2024ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡಿರುವ ಪಕ್ಷದ ಒಬಿಸಿ ಮೋರ್ಚಾ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ತನ್ನ ಒಂಬತ್ತು ವರ್ಷಗಳ ಆಡಳಿತಾವಧಿಯಲ್ಲಿ ಮಾಡಿರುವ ಸಾಧನೆಗಳನ್ನು ಬಿಂಬಿಸುವ ಸಲುವಾಗಿ ಒಂಬತ್ತು ದಿನಗಳ ಕಾರ್ಯಕ್ರಮವೊಂದನ್ನು ನಡೆಸಲು ಈಗಾಗಲೇ ನಿರ್ಧರಿಸಿದೆ. ಆದರೆ ಈಗ ರಾಹುಲ್ ಅವರು ಒಬಿಸಿ ಸಮುದಾಯವನ್ನು ಅವಮಾನಿಸಿರುವ ವಿಚಾರವನ್ನೇ ಕಾರ್ಯಕ್ರಮದ ಮೂಲ ಧ್ಯೇಯವನ್ನಾಗಿಸಿಕೊಳ್ಳಲು ತೀರ್ಮಾನಿಸಿದೆ.