<p><strong>ಭುವನೇಶ್ವರ:</strong> ರಾಜ್ಯದ ʼಬಿಜು ಸ್ವಸ್ಥ್ಯ ಕಲ್ಯಾಣ ಯೋಜನೆʼಯ (ಬಿಎಸ್ಕೆವೈ) ಫಲಾನುಭವಿಗಳಿಗೆ ಸ್ಮಾರ್ಟ್ಕಾರ್ಡ್ ವಿತರಿಸುವ ಕಾರ್ಯಕ್ರಮಕ್ಕೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಗಜಪತಿ ಜಿಲ್ಲೆಯಲ್ಲಿ ಚಾಲನೆ ನೀಡಿದ್ದಾರೆ.</p>.<p>ಗಜಪತಿ ಜಿಲ್ಲೆಯ ಪಾರ್ಲಖೆಮುಂಡಿಯಲ್ಲಿನಡೆದಸಮಾರಂಭದಲ್ಲಿ ಮಾತನಾಡಿದಪಟ್ನಾಯಕ್, ಈ ಯೋಜನೆಯಿಂದಾಗಿ ಜಿಲ್ಲೆಯ1.35 ಲಕ್ಷ ಬಿಎಸ್ಕೆವೈ ಫಲಾನುಭವಿಗಳಿಗೆ ನೆರವಾಗಲಿದ್ದು, ಚಿಕಿತ್ಸೆ ಸಂದರ್ಭದಲ್ಲಿ ಆರ್ಥಿಕ ಹೊರೆ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ.</p>.<p>ಮುಂದುವರಿದು,ʼಜನರು ಚಿಕಿತ್ಸೆ ವೆಚ್ಚ ಭರಿಸುವ ಸಲುವಾಗಿ ಚಿನ್ನ, ಭೂಮಿ ಮಾರಾಟ ಮಾಡುತ್ತಿದ್ದರು. ಅಂತಹ ಸುದ್ದಿಗಳು ಗಮನಕ್ಕೆ ಬಂದಾಗ ನೋವಾಗುತ್ತದೆ. ಇದೀಗಫಲಾನುಭವಿಗಳು ಈ ಕಾರ್ಡ್ಗಳನ್ನು ಬಳಸಿಕೊಂಡುದೇಶದ 200ಕ್ಕೂ ಹೆಚ್ಚು ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆ ಪಡೆಯಬಹುದಾಗಿದೆʼ ಎಂದು ತಿಳಿಸಿದ್ದಾರೆ.</p>.<p>ರಾಜ್ಯದ ಸಾರ್ವತ್ರಿಕ ಆರೋಗ್ಯ ಯೋಜನೆಯಾಗಿರುವಬಿಎಸ್ಕೆವೈ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್ಗಳನ್ನು ವಿತರಿಸುವುದಾಗಿಈ ವರ್ಷದ ಸ್ವತಂತ್ರ್ಯೋತ್ಸವದ ವೇಳೆ ಪಟ್ನಾಯಕ್ ಘೋಷಿಸಿದ್ದರು.</p>.<p>ಇದಕ್ಕೂ ಮೊದಲು ಮಲ್ಕಾನ್ಗಿರಿ, ಸುಂದರ್ಗಡ ಮತ್ತು ಬೊಲಾಂಗೀರ್ಗಳಲ್ಲಿ ಕಾರ್ಡ್ ವಿತರಣೆಗೆ ಚಾಲನೆ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ:</strong> ರಾಜ್ಯದ ʼಬಿಜು ಸ್ವಸ್ಥ್ಯ ಕಲ್ಯಾಣ ಯೋಜನೆʼಯ (ಬಿಎಸ್ಕೆವೈ) ಫಲಾನುಭವಿಗಳಿಗೆ ಸ್ಮಾರ್ಟ್ಕಾರ್ಡ್ ವಿತರಿಸುವ ಕಾರ್ಯಕ್ರಮಕ್ಕೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಗಜಪತಿ ಜಿಲ್ಲೆಯಲ್ಲಿ ಚಾಲನೆ ನೀಡಿದ್ದಾರೆ.</p>.<p>ಗಜಪತಿ ಜಿಲ್ಲೆಯ ಪಾರ್ಲಖೆಮುಂಡಿಯಲ್ಲಿನಡೆದಸಮಾರಂಭದಲ್ಲಿ ಮಾತನಾಡಿದಪಟ್ನಾಯಕ್, ಈ ಯೋಜನೆಯಿಂದಾಗಿ ಜಿಲ್ಲೆಯ1.35 ಲಕ್ಷ ಬಿಎಸ್ಕೆವೈ ಫಲಾನುಭವಿಗಳಿಗೆ ನೆರವಾಗಲಿದ್ದು, ಚಿಕಿತ್ಸೆ ಸಂದರ್ಭದಲ್ಲಿ ಆರ್ಥಿಕ ಹೊರೆ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ.</p>.<p>ಮುಂದುವರಿದು,ʼಜನರು ಚಿಕಿತ್ಸೆ ವೆಚ್ಚ ಭರಿಸುವ ಸಲುವಾಗಿ ಚಿನ್ನ, ಭೂಮಿ ಮಾರಾಟ ಮಾಡುತ್ತಿದ್ದರು. ಅಂತಹ ಸುದ್ದಿಗಳು ಗಮನಕ್ಕೆ ಬಂದಾಗ ನೋವಾಗುತ್ತದೆ. ಇದೀಗಫಲಾನುಭವಿಗಳು ಈ ಕಾರ್ಡ್ಗಳನ್ನು ಬಳಸಿಕೊಂಡುದೇಶದ 200ಕ್ಕೂ ಹೆಚ್ಚು ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆ ಪಡೆಯಬಹುದಾಗಿದೆʼ ಎಂದು ತಿಳಿಸಿದ್ದಾರೆ.</p>.<p>ರಾಜ್ಯದ ಸಾರ್ವತ್ರಿಕ ಆರೋಗ್ಯ ಯೋಜನೆಯಾಗಿರುವಬಿಎಸ್ಕೆವೈ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್ಗಳನ್ನು ವಿತರಿಸುವುದಾಗಿಈ ವರ್ಷದ ಸ್ವತಂತ್ರ್ಯೋತ್ಸವದ ವೇಳೆ ಪಟ್ನಾಯಕ್ ಘೋಷಿಸಿದ್ದರು.</p>.<p>ಇದಕ್ಕೂ ಮೊದಲು ಮಲ್ಕಾನ್ಗಿರಿ, ಸುಂದರ್ಗಡ ಮತ್ತು ಬೊಲಾಂಗೀರ್ಗಳಲ್ಲಿ ಕಾರ್ಡ್ ವಿತರಣೆಗೆ ಚಾಲನೆ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>