ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೀಪಾವಳಿಗೆ ಪಟಾಕಿ ಮಾರಾಟ, ಸುಡುವುದನ್ನು ನಿಷೇಧಿಸಿದ ಒಡಿಶಾ ಸರ್ಕಾರ

Last Updated 4 ನವೆಂಬರ್ 2020, 11:17 IST
ಅಕ್ಷರ ಗಾತ್ರ

ಭುವನೇಶ್ವರ: ರಾಜಸ್ಥಾನ ಸರ್ಕಾರ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಮಾರಾಟ ಮತ್ತು ಸುಡುವುದನ್ನು ನಿಷೇಧಿಸಿದ ಬೆನ್ನಲೇ, ಒಡಿಶಾ ಸರ್ಕಾರ ಕೂಡ ಪಟಾಕಿ ಮಾರಾಟ ಮತ್ತು ಸಿಡಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

ಕೋವಿಡ್-19 ಪರಿಣಾಮ ಈ ಕ್ರಮತೆಗೆದುಕೊಳ್ಳಲಾಗಿದೆ ಎಂದು ಓಡಿಶಾ ಸರ್ಕಾರ ತಿಳಿಸಿದೆ. ಪಟಾಕಿ ಸಿಡಿಸುವುದರಿಂದ ವಾಯು ಮಾಲಿನ್ಯ ಹೆಚ್ಚಾಗಿ ಉಸಿರಾಟಕ್ಕೆ ತೊಂದರೆಯಾಗುವುದರಿಂದ 2020ರ ನವೆಂಬರ್ 10 ರಿಂದ 30 ರವರೆಗೆ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ಸರ್ಕಾರ ನಿಷೇಧಿಸಿದೆ.

ಪಟಾಕಿ ಸುಡುವುದರಿಂದ ನೈಟ್ರೆಸ್‌ ಆಕ್ಸೈಡ್, ಸಲ್ಫರ್ ಡೈಆಕ್ಸೈಡ್ ಹಾಗೂ ಕಾರ್ಬನ್ ಮಾನಾಕ್ಸೈಡ್ ನಂತಹ ಹಾನಿಕಾರಕ ರಾಸಾಯನಿಕಗಳು ಹೆಚ್ಚಿನ ಪ್ರಮಾಣದಲ್ಲಿ ಬಿಡುಗಡೆಯಾಗುವುದರಿಂದ ಅವು ಕೊರೊನಾ ಸೋಂಕಿತರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಪಟಾಕಿಯನ್ನು ನಿಷೇಧಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಸಾರ್ವಜನಿಕರು ಸರ್ಕಾರದ ಆದೇಶಗಳನ್ನು ಉಲ್ಲಂಘಿಸಿದರೆ ವಿಪತ್ತು ನಿರ್ವಹಣಾ ಕಾಯ್ದೆ - 2005 ಅಡಿ ಶಿಕ್ಷೆಗೆ ಅರ್ಹರೆಂದು ಸರ್ಕಾರ ಆದೇಶ ಹೊರಡಿಸಿದೆ.

ದೀಪಾವಳಿಯಂದು ಮಣ್ಣಿನ ದೀಪಗಳು ಮತ್ತು ಮೇಣದ ಬತ್ತಿಗಳನ್ನು ಹಚ್ಚುವ ಮೂಲಕ ಹಬ್ಬ ಆಚರಿಸುವಂತೆ ಒಡಿಶಾ ಸರ್ಕಾರ ಜನರಿಗೆ ಮನವಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT