ಶುಕ್ರವಾರ, ಮಾರ್ಚ್ 31, 2023
33 °C

ಒಡಿಶಾ ಆರೋಗ್ಯ ಸಚಿವ ನಬಾ ದಾಸ್ ಮೇಲೆ ಗುಂಡು ಹಾರಿಸಿದ ಎಎಸ್‌ಐ, ಗಂಭೀರ ಗಾಯ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಭುವನೇಶ್ವರ: ಒಡಿಶಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ನಬಾ ಕಿಶೋರ್ ದಾಸ್ ಮೇಲೆ ಪೊಲೀಸ್ ಅಧಿಕಾರಿಯೊಬ್ಬರು ಗುಂಡು ಹಾರಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. 

ಝಾರಸುಗುಡ ಜಿಲ್ಲೆಯ ಬ್ರಜರಾಜನಗರ್​ನ ಗಾಂಧಿ ಚೌಕ ಎಂಬಲ್ಲಿ ಭಾನುವಾರ ಮಧ್ಯಾಹ್ನ ಈ ಘಟನೆ ಸಂಭವಿಸಿದೆ. ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ಗೋಪಾಲ್ ಚಂದ್ರ ದಾಸ್ ಅವರು ಸಚಿವರ ಎದೆಗೆ ಗುಂಡು ಹಾರಿಸಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.

ನಬಾ ದಾಸ್ ಅವರು ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕಾರಿನಿಂದ ಕೆಳಗಿಳಿಯುವಾಗ ಈ ದಾಳಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಹೆಚ್ಚಿನ ಮಾಹಿತಿ ಅಪ್‌ಡೇಟ್ ಮಾಡಲಾಗುವುದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು