ಬೆಳಗಿನ ಜಾವ ಬಾಲಕಿ ಜಮೀನಿಗೆ ತೆರಳಿದ್ದಾಗ ಕೊಡಲಿಯೊಂದಿಗೆ ಅಲ್ಲಿಗೆ ತೆರಳಿದ ಆರೋಪಿ ತಲೆ ಕಡಿದು ಹತ್ಯೆ ಮಾಡಿದ್ದಾನೆ. ಮುಂಡದಿಂದ ಬೇರ್ಪಟ್ಟ ರುಂಡವನ್ನು ಹಿಡಿದುಕೊಂಡು ಊರೂರು ಅಲೆದು, ಕೊಳವೆ ಬಾವಿಯ ಬಳಿ ತೊಳೆದಿದ್ದಾನೆ. ಇದನ್ನು ಕಂಡ ಆರೋಪಿಯ ಪತ್ನಿ, ಆತನೊಂದಿಗೆ ತೀವ್ರ ವಾಗ್ವಾದಕ್ಕಿಳಿದಿದ್ದಾರೆ. ಆದರೆ ಆತ ಕೊಡಲಿಯನ್ನು ತೋರಿಸಿ ಬೆದರಿಕೆ ಒಡ್ಡಿದ್ದಾನೆ.