ಈ ವಿಚಾರವಾಗಿ ಎಎನ್ಐ ಸುದ್ದಿಸಂಸ್ಥೆ ಜೊತೆ ಮಾತನಾಡಿರುವ ಅವರು, 'ಈ ಬಿಕ್ಕಟ್ಟಿನ ಸಮಯದಲ್ಲೂ ತಮ್ಮ ಕರ್ತವ್ಯ ಹಾಗೂ ಜವಾಬ್ದಾರಿಗಳನ್ನು ಎತ್ತಿಹಿಡಿಯುವ ಪ್ರತಿಜ್ಞೆಯನ್ನು ಸದನದ ಸದಸ್ಯರು ತೆಗೆದುಕೊಂಡಿದ್ದಾರೆ. ಅಧಿವೇಶನದಲ್ಲಿ ಎಲ್ಲಾ ಸದಸ್ಯರು ಹಾಜರಿದ್ದು ಫಲಪ್ರದ ಚರ್ಚೆಗಳಲ್ಲಿ ತೊಡಗುತ್ತಾರೆ ಎಂಬುದಾಗಿ ನಾನು ಭಾವಿಸುತ್ತೇನೆ' ಎಂದು ಬಿರ್ಲಾ ಹೇಳಿದ್ದಾರೆ.