<p><strong>ನವದೆಹಲಿ:</strong> ವಿದೇಶಗಳಿಂದ ಬಂದ ನಾಲ್ವರು ಪ್ರಯಾಣಿಕರನ್ನು ದೆಹಲಿಯ ಲೋಕ ನಾಯಕ್ ಜಯಪ್ರಕಾಶ್ ನಾರಾಯಣ್ (ಎಲ್ಎನ್ಜೆಪಿ) ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಿಗೆ ಕೊರೊನಾ ವೈರಸ್ನ ರೂಪಾಂತರ ತಳಿ ಓಮೈಕ್ರಾನ್ ತಗುಲಿರುವ ಶಂಕೆ ವ್ಯಕ್ತವಾಗಿದೆ.</p>.<p>ಪ್ರಯಾಣಿಕರನ್ನು ಓಮೈಕ್ರಾನ್ ಸೋಂಕಿತರಿಗೆ ಚಿಕಿತ್ಸೆ ನೀಡುವ ವಿಶೇಷ ಐಸೋಲೇಷನ್ ವಾರ್ಡ್ಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಸದ್ಯ ವಿಶೇಷ ವಾರ್ಡ್ನಲ್ಲಿ ಒಟ್ಟು 30 ಮಂದಿ ಇದ್ದು, 25 ಮಂದಿಯಲ್ಲಿ ಕೋವಿಡ್ ದೃಢಪಟ್ಟಿದೆ. ಐವರಲ್ಲಿ ಸೋಂಕಿನ ಶಂಕೆ ಇದೆ. ಇವತ್ತು ದಾಖಲಾಗಿರುವ ನಾಲ್ವರೂ ಭಾರತೀಯರು’ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಸುರೇಶ್ ಕುಮಾರ್ ತಿಳಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/district/bengaluru-city/bengaluru-doc-who-recovered-from-omicron-tests-covid-positive-again-890597.html" itemprop="url">ಓಮೈಕ್ರಾನ್ ಸೋಂಕಿನಿಂದ ಚೇತರಿಸಿಕೊಂಡಿದ್ದ ವೈದ್ಯನಿಗೆ ಮತ್ತೆ ಕೋವಿಡ್ ಪಾಸಿಟಿವ್ </a></p>.<p>ದೆಹಲಿಯಲ್ಲಿ ಭಾನುವಾರ ಮೊದಲ ಓಮೈಕ್ರಾನ್ ಪ್ರಕರಣ ದೃಢಪಟ್ಟಿತ್ತು. ಸೋಂಕಿತ ವ್ಯಕ್ತಿ ಪೂರ್ತಿಯಾಗಿ ಲಸಿಕೆ ಪಡೆದಿದ್ದು, ತಾಂಜಾನಿಯಾದಿಂದ ಬಂದಿದ್ದರು. ಇವರು ರಾಂಚಿಯವರಾಗಿದ್ದು, ತಾಂಜಾನಿಯಾದಿಂದ ದೋಹಾಗೆ ಪ್ರಯಾಣಿಸಿ ಬಳಿಕ ದೆಹಲಿಗೆ ಬಂದಿದ್ದರು. ಈ ಮಧ್ಯೆ ಅವರು ದಕ್ಷಿಣ ಆಫ್ರಿಕಾದ ಜೊಹಾನ್ಸ್ಬರ್ಗ್ನಲ್ಲಿ ಒಂದು ವಾರ ತಂಗಿದ್ದರು. ಅವರಲ್ಲಿ ಸೌಮ್ಯವಾದ ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ವಿದೇಶಗಳಿಂದ ಬಂದ ನಾಲ್ವರು ಪ್ರಯಾಣಿಕರನ್ನು ದೆಹಲಿಯ ಲೋಕ ನಾಯಕ್ ಜಯಪ್ರಕಾಶ್ ನಾರಾಯಣ್ (ಎಲ್ಎನ್ಜೆಪಿ) ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಿಗೆ ಕೊರೊನಾ ವೈರಸ್ನ ರೂಪಾಂತರ ತಳಿ ಓಮೈಕ್ರಾನ್ ತಗುಲಿರುವ ಶಂಕೆ ವ್ಯಕ್ತವಾಗಿದೆ.</p>.<p>ಪ್ರಯಾಣಿಕರನ್ನು ಓಮೈಕ್ರಾನ್ ಸೋಂಕಿತರಿಗೆ ಚಿಕಿತ್ಸೆ ನೀಡುವ ವಿಶೇಷ ಐಸೋಲೇಷನ್ ವಾರ್ಡ್ಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಸದ್ಯ ವಿಶೇಷ ವಾರ್ಡ್ನಲ್ಲಿ ಒಟ್ಟು 30 ಮಂದಿ ಇದ್ದು, 25 ಮಂದಿಯಲ್ಲಿ ಕೋವಿಡ್ ದೃಢಪಟ್ಟಿದೆ. ಐವರಲ್ಲಿ ಸೋಂಕಿನ ಶಂಕೆ ಇದೆ. ಇವತ್ತು ದಾಖಲಾಗಿರುವ ನಾಲ್ವರೂ ಭಾರತೀಯರು’ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಸುರೇಶ್ ಕುಮಾರ್ ತಿಳಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/district/bengaluru-city/bengaluru-doc-who-recovered-from-omicron-tests-covid-positive-again-890597.html" itemprop="url">ಓಮೈಕ್ರಾನ್ ಸೋಂಕಿನಿಂದ ಚೇತರಿಸಿಕೊಂಡಿದ್ದ ವೈದ್ಯನಿಗೆ ಮತ್ತೆ ಕೋವಿಡ್ ಪಾಸಿಟಿವ್ </a></p>.<p>ದೆಹಲಿಯಲ್ಲಿ ಭಾನುವಾರ ಮೊದಲ ಓಮೈಕ್ರಾನ್ ಪ್ರಕರಣ ದೃಢಪಟ್ಟಿತ್ತು. ಸೋಂಕಿತ ವ್ಯಕ್ತಿ ಪೂರ್ತಿಯಾಗಿ ಲಸಿಕೆ ಪಡೆದಿದ್ದು, ತಾಂಜಾನಿಯಾದಿಂದ ಬಂದಿದ್ದರು. ಇವರು ರಾಂಚಿಯವರಾಗಿದ್ದು, ತಾಂಜಾನಿಯಾದಿಂದ ದೋಹಾಗೆ ಪ್ರಯಾಣಿಸಿ ಬಳಿಕ ದೆಹಲಿಗೆ ಬಂದಿದ್ದರು. ಈ ಮಧ್ಯೆ ಅವರು ದಕ್ಷಿಣ ಆಫ್ರಿಕಾದ ಜೊಹಾನ್ಸ್ಬರ್ಗ್ನಲ್ಲಿ ಒಂದು ವಾರ ತಂಗಿದ್ದರು. ಅವರಲ್ಲಿ ಸೌಮ್ಯವಾದ ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>