<p><strong>ನವದೆಹಲಿ: </strong>ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೊನಾ ವೈರಸ್ನ ರೂಪಾಂತರ ತಳಿ ‘ಓಮಿಕ್ರಾನ್’ ಕುರಿತಂತೆ ವಿಶ್ವದಾದ್ಯಂತ ಆತಂಕ ಮನೆಮಾಡಿದ್ದು, ಅಂತರರಾಷ್ಟ್ರೀಯ ಸಂಚಾರ ನಿರ್ಬಂಧ ಸಡಿಲಿಸುವ ಬಗ್ಗೆ ಮರುಪರಿಶೀಲನೆ ನಡೆಸುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅಧಿಕಾರಿಗಳಿಗೆ ಸೂಚಿಸಿದ್ದಾರೆ.<br /><br />ದೇಶದಲ್ಲಿ ಕೋವಿಡ್ 19 ಮತ್ತು ಲಸಿಕೆ ವಿತರಣೆ ಕುರಿತಾದ ಅಧಿಕಾರಿಗಳ ಸಮಗ್ರ ಪರಿಶೀಲನಾ ಸಭೆಯಲ್ಲಿ ಕೊರೊನಾ ರೂಪಾಂತರ ತಳಿ ‘ಓಮಿಕ್ರಾನ್’ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಮೋದಿಗೆ ವಿವರಣೆ ನೀಡಿದ್ದಾರೆ. ಅತ್ಯಂತ ಅಪಾಯಕಾರಿ ಎನ್ನಲಾಗುತ್ತಿರುವ ಈ ತಳಿಯನ್ನು ವಿಶ್ವ ಆರೋಗ್ಯ ಸಂಸ್ಥೆಯು ‘ಕಳವಳಕಾರಿ ರೂಪಾಂತರ’ಎಂದು ಕರೆದಿದ್ದು, ಹಲವು ದೇಶಗಳಲ್ಲಿ ಇದು ಕಂಡುಬಂದಿದೆ ಎಂದು ವಿವರಿಸಿದ್ದಾರೆ.<br /><br />ಇದು ‘ಡೆಲ್ಟಾ’ರೀತಿಯೇ ಕಳವಳಕಾರಿ ಮತ್ತು ಹೆಚ್ಚು ಸಾಂಕ್ರಾಮಿಕವಾಗಬಲ್ಲ ತಳಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದು, ‘ಓಮಿಕ್ರಾನ್’ಎಂದು ಹೆಸರಿಟ್ಟಿದೆ.</p>.<p>2 ಗಂಟೆಗಳ ಕಾಲ ನಡೆದ ಸಭೆಯಲ್ಲಿ ಕೊರೊನಾ ರೂಪಾಂತರ ತಳಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಅತ್ಯಂತ ಕ್ರಿಯಾಶೀಲರಾಗಿರಬೇಕು. ಜನರೂ ಸಹ ಅತ್ಯಂತ ಜಾಗರೂಕರಾಗಿರಬೇಕು. ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರದಂತಹ ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಪ್ರಧಾನಿ ಹೇಳಿರುವುದಾಗಿ ಪ್ರಧಾನಿ ಸಚಿವಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ವಿದೇಶಗಳಿಂದ ಬರುವ ಎಲ್ಲರ ಮೇಲೂ ನಿಗಾ ಇಡಬೇಕು. ಮಾರ್ಗಸೂಚಿಯಂತೆ ಅವರನ್ನು ಪರೀಕ್ಷೆಗೆ ಒಳಪಡಿಸಬೇಕು. ಈ ಸೋಂಕಿನ ಅಪಾಯದಲ್ಲಿರುವ ರಾಷ್ಟ್ರಗಳ ಬಗ್ಗೆಯೂ ಎಚ್ಚರಿಕೆ ವಹಿಸಬೇಕು ಎಂದು ಅವರು ಹೇಳಿದ್ದಾರೆ.</p>.<p>ಅಂತರರಾಷ್ಟ್ರೀಯ ವಿಮಾನಗಳ ಸಂಚಾರ ನಿರ್ಬಂಧ ಹಿಂತೆಗೆತ ನಿರ್ಧಾರವನ್ನು ಮರುಪರಿಶೀಲಿಸುವಂತೆಯೂ ಅವರು ಸೂಚಿಸಿದ್ದಾರೆ.</p>.<p>ನಾಗರಿಕ ವಿಮಾನಯಾನ ಸಚಿವಾಲಯ ಅಂತರರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ಒಂದು ದಿನದ ಬಳಿಕ ಮೋದಿ ಅಧಿಕಾರಿಗಳಿಗೆ ಈ ನಿರ್ದೆಶನ ಕೊಟ್ಟಿದ್ದಾರೆ.</p>.<p>ಬ್ರಿಟನ್, ಜರ್ಮನಿ, ಸಿಂಗಪುರ, ಇಸ್ರೇಲ್, ಫ್ರಾನ್ಸ್ ಮತ್ತು ಇಟಲಿ ದೇಶಗಳಲ್ಲಿ ದಕ್ಷಿಣ ಆಫ್ರಿಕಾ ವಿಮಾನಗಳಿಗೆ ನಿರ್ಬಂಧ ಹೇರಿದ ಸಂದರ್ಭದಲ್ಲೇ ಭಾರತದಲ್ಲಿ ಅಂತರರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.</p>.<p>‘ಓಮಿಕ್ರಾನ್’ ರೂಪಾಂತರ ಪತ್ತೆಯಾಗಿರುವ ದಕ್ಷಿಣ ಆಫ್ರಿಕಾ, ಹಾಂಗ್ಕಾಂಗ್, ಬೊತ್ಸ್ವಾನಾಗಳಿಂದ ಬರುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ನಡೆಸುವಂತೆ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಈಗಾಗಲೇ ಸೂಚಿಸಿದೆ.</p>.<p>‘ಕೊರೊನಾದ ರೂಪಾಂತರ ತಳಿ ಪತ್ತೆಯಾಗಿರುವುದರಿಂದ ನಾವು ಜಾಗೃತರಾಗಿದ್ದೇವೆ. ಕೋವಿಡ್–19 ಮತ್ತು ಲಸಿಕೆ ಕುರಿತಾದ ಪರಿಶೀಲನಾ ಸಭೆಯಲ್ಲಿ ಕಂಟೈನ್ಮೆಂಟ್ ಮತ್ತು ಎರಡನೇ ಡೋಸ್ ಲಸಿಕೆ ನೀಡಿಕೆ ಹೆಚ್ಚಳದ ಬಗ್ಗೆ ಚರ್ಚೆ ನಡೆಸಲಾಯಿತು’ಎಂದು ನರೇಂದ್ರ ಮೋದಿ ಟ್ವೀಟ್ ಮೂಲಕ ತಿಳಿಸಿದ್ದಾರೆ.</p>.<p>ನಿಯಮಗಳ ಪ್ರಕಾರ, ಅಂತರರಾಷ್ಟ್ರೀಯ ಪ್ರಯಾಣಿಕರ ಜಿನೋಮ್ ಸೀಕ್ವೆನ್ಸಿಂಗ್ ಮಾದರಿ ಸಂಗ್ರಹಿಸಿ ನೆಟ್ವರ್ಕ್ ಪ್ರಯೋಗಾಲಯಗಳಲ್ಲಿ ಪರೀಕ್ಷೆ ನಡೆಸುವಂತೆಯೂ ಮೋದಿ ಸೂಚಿಸಿದ್ದಾರೆ.<br /><br />***</p>.<p>*ಚೆನ್ನೈ, ಕೊಯಮತ್ತೂರು, ಮದುರೈ ಹಾಗೂ ತಿರುಚಿನಾಪಳ್ಳಿ ವಿಮಾನ ನಿಲ್ದಾಣಗಳಿಗೆ ಬಂದಿಳಿಯುವ ಅಂತರರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ ಇರಿಸಲು ನಾಲ್ಕು ಅಧಿಕಾರಿಗಳನ್ನು ತಮಿಳುನಾಡು ಸರ್ಕಾರ ನೇಮಿಸಿದೆ.</p>.<p>*ಕೇಂದ್ರ ಆರೋಗ್ಯ ಸಚಿವಾಲಯ ವರ್ಗೀಕರಿಸಿದ ದೇಶಗಳ ಪ್ರಯಾಣಿಕರು ಗುಜರಾತ್ಗೆ ಬಂದಿಳಿದಾಗ, ಅವರಿಗೆ ಆರ್ಟಿಪಿಸಿಆರ್ ಪರೀಕ್ಷೆ ಕಡ್ಡಾಯ</p>.<p>*ದಕ್ಷಿಣ ಆಫ್ರಿಕಾದಿಂದ ಬರುವ ಪ್ರಯಾಣಿಕರಿಗೆ ಮುಂಬೈನಲ್ಲಿ ಕ್ವಾರಂಟೈನ್: ಮೇಯರ್ ಕಿಶೋರಿ ಪೆಡ್ನೇಕರ್</p>.<p>*ಶಬರಿಮಲೆ ಯಾತ್ರೆಯಲ್ಲಿ ಪಾಲ್ಗೊ<br />ಳ್ಳುವ ಮಕ್ಕಳಿಗೆ ಆರ್ಟಿಪಿಸಿಆರ್ ಪರೀಕ್ಷೆ ಕಡ್ಡಾಯವಲ್ಲ ಎಂದು ಕೇರಳ ಸರ್ಕಾರ ತಿಳಿಸಿದೆ. ಉಳಿದವರಿಗೆ ಎರಡೂ ಡೋಸ್ ಹಾಕಿಸಿಕೊಂಡ ಪ್ರಮಾಣಪತ್ರ ಅಥವಾ ಆರ್ಟಿಪಿಸಿಆರ್ ಪ್ರಮಾಣಪತ್ರ ಕಡ್ಡಾಯ ಮಾಡಲಾಗಿದೆ</p>.<p>*ಒಡಿಶಾದಲ್ಲಿ ಶನಿವಾರ 41 ಮಕ್ಕಳೂ ಸೇರಿದಂತೆ 264 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಮೂವರು ಮೃತಪಟ್ಟಿದ್ದಾರೆ. ಶುಕ್ರವಾರವೂ 219 ಜನರಲ್ಲಿ ಸೋಂಕು ಪತ್ತೆಯಾಗಿತ್ತು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೊನಾ ವೈರಸ್ನ ರೂಪಾಂತರ ತಳಿ ‘ಓಮಿಕ್ರಾನ್’ ಕುರಿತಂತೆ ವಿಶ್ವದಾದ್ಯಂತ ಆತಂಕ ಮನೆಮಾಡಿದ್ದು, ಅಂತರರಾಷ್ಟ್ರೀಯ ಸಂಚಾರ ನಿರ್ಬಂಧ ಸಡಿಲಿಸುವ ಬಗ್ಗೆ ಮರುಪರಿಶೀಲನೆ ನಡೆಸುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅಧಿಕಾರಿಗಳಿಗೆ ಸೂಚಿಸಿದ್ದಾರೆ.<br /><br />ದೇಶದಲ್ಲಿ ಕೋವಿಡ್ 19 ಮತ್ತು ಲಸಿಕೆ ವಿತರಣೆ ಕುರಿತಾದ ಅಧಿಕಾರಿಗಳ ಸಮಗ್ರ ಪರಿಶೀಲನಾ ಸಭೆಯಲ್ಲಿ ಕೊರೊನಾ ರೂಪಾಂತರ ತಳಿ ‘ಓಮಿಕ್ರಾನ್’ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಮೋದಿಗೆ ವಿವರಣೆ ನೀಡಿದ್ದಾರೆ. ಅತ್ಯಂತ ಅಪಾಯಕಾರಿ ಎನ್ನಲಾಗುತ್ತಿರುವ ಈ ತಳಿಯನ್ನು ವಿಶ್ವ ಆರೋಗ್ಯ ಸಂಸ್ಥೆಯು ‘ಕಳವಳಕಾರಿ ರೂಪಾಂತರ’ಎಂದು ಕರೆದಿದ್ದು, ಹಲವು ದೇಶಗಳಲ್ಲಿ ಇದು ಕಂಡುಬಂದಿದೆ ಎಂದು ವಿವರಿಸಿದ್ದಾರೆ.<br /><br />ಇದು ‘ಡೆಲ್ಟಾ’ರೀತಿಯೇ ಕಳವಳಕಾರಿ ಮತ್ತು ಹೆಚ್ಚು ಸಾಂಕ್ರಾಮಿಕವಾಗಬಲ್ಲ ತಳಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದು, ‘ಓಮಿಕ್ರಾನ್’ಎಂದು ಹೆಸರಿಟ್ಟಿದೆ.</p>.<p>2 ಗಂಟೆಗಳ ಕಾಲ ನಡೆದ ಸಭೆಯಲ್ಲಿ ಕೊರೊನಾ ರೂಪಾಂತರ ತಳಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಅತ್ಯಂತ ಕ್ರಿಯಾಶೀಲರಾಗಿರಬೇಕು. ಜನರೂ ಸಹ ಅತ್ಯಂತ ಜಾಗರೂಕರಾಗಿರಬೇಕು. ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರದಂತಹ ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಪ್ರಧಾನಿ ಹೇಳಿರುವುದಾಗಿ ಪ್ರಧಾನಿ ಸಚಿವಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ವಿದೇಶಗಳಿಂದ ಬರುವ ಎಲ್ಲರ ಮೇಲೂ ನಿಗಾ ಇಡಬೇಕು. ಮಾರ್ಗಸೂಚಿಯಂತೆ ಅವರನ್ನು ಪರೀಕ್ಷೆಗೆ ಒಳಪಡಿಸಬೇಕು. ಈ ಸೋಂಕಿನ ಅಪಾಯದಲ್ಲಿರುವ ರಾಷ್ಟ್ರಗಳ ಬಗ್ಗೆಯೂ ಎಚ್ಚರಿಕೆ ವಹಿಸಬೇಕು ಎಂದು ಅವರು ಹೇಳಿದ್ದಾರೆ.</p>.<p>ಅಂತರರಾಷ್ಟ್ರೀಯ ವಿಮಾನಗಳ ಸಂಚಾರ ನಿರ್ಬಂಧ ಹಿಂತೆಗೆತ ನಿರ್ಧಾರವನ್ನು ಮರುಪರಿಶೀಲಿಸುವಂತೆಯೂ ಅವರು ಸೂಚಿಸಿದ್ದಾರೆ.</p>.<p>ನಾಗರಿಕ ವಿಮಾನಯಾನ ಸಚಿವಾಲಯ ಅಂತರರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ಒಂದು ದಿನದ ಬಳಿಕ ಮೋದಿ ಅಧಿಕಾರಿಗಳಿಗೆ ಈ ನಿರ್ದೆಶನ ಕೊಟ್ಟಿದ್ದಾರೆ.</p>.<p>ಬ್ರಿಟನ್, ಜರ್ಮನಿ, ಸಿಂಗಪುರ, ಇಸ್ರೇಲ್, ಫ್ರಾನ್ಸ್ ಮತ್ತು ಇಟಲಿ ದೇಶಗಳಲ್ಲಿ ದಕ್ಷಿಣ ಆಫ್ರಿಕಾ ವಿಮಾನಗಳಿಗೆ ನಿರ್ಬಂಧ ಹೇರಿದ ಸಂದರ್ಭದಲ್ಲೇ ಭಾರತದಲ್ಲಿ ಅಂತರರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.</p>.<p>‘ಓಮಿಕ್ರಾನ್’ ರೂಪಾಂತರ ಪತ್ತೆಯಾಗಿರುವ ದಕ್ಷಿಣ ಆಫ್ರಿಕಾ, ಹಾಂಗ್ಕಾಂಗ್, ಬೊತ್ಸ್ವಾನಾಗಳಿಂದ ಬರುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ನಡೆಸುವಂತೆ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಈಗಾಗಲೇ ಸೂಚಿಸಿದೆ.</p>.<p>‘ಕೊರೊನಾದ ರೂಪಾಂತರ ತಳಿ ಪತ್ತೆಯಾಗಿರುವುದರಿಂದ ನಾವು ಜಾಗೃತರಾಗಿದ್ದೇವೆ. ಕೋವಿಡ್–19 ಮತ್ತು ಲಸಿಕೆ ಕುರಿತಾದ ಪರಿಶೀಲನಾ ಸಭೆಯಲ್ಲಿ ಕಂಟೈನ್ಮೆಂಟ್ ಮತ್ತು ಎರಡನೇ ಡೋಸ್ ಲಸಿಕೆ ನೀಡಿಕೆ ಹೆಚ್ಚಳದ ಬಗ್ಗೆ ಚರ್ಚೆ ನಡೆಸಲಾಯಿತು’ಎಂದು ನರೇಂದ್ರ ಮೋದಿ ಟ್ವೀಟ್ ಮೂಲಕ ತಿಳಿಸಿದ್ದಾರೆ.</p>.<p>ನಿಯಮಗಳ ಪ್ರಕಾರ, ಅಂತರರಾಷ್ಟ್ರೀಯ ಪ್ರಯಾಣಿಕರ ಜಿನೋಮ್ ಸೀಕ್ವೆನ್ಸಿಂಗ್ ಮಾದರಿ ಸಂಗ್ರಹಿಸಿ ನೆಟ್ವರ್ಕ್ ಪ್ರಯೋಗಾಲಯಗಳಲ್ಲಿ ಪರೀಕ್ಷೆ ನಡೆಸುವಂತೆಯೂ ಮೋದಿ ಸೂಚಿಸಿದ್ದಾರೆ.<br /><br />***</p>.<p>*ಚೆನ್ನೈ, ಕೊಯಮತ್ತೂರು, ಮದುರೈ ಹಾಗೂ ತಿರುಚಿನಾಪಳ್ಳಿ ವಿಮಾನ ನಿಲ್ದಾಣಗಳಿಗೆ ಬಂದಿಳಿಯುವ ಅಂತರರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ ಇರಿಸಲು ನಾಲ್ಕು ಅಧಿಕಾರಿಗಳನ್ನು ತಮಿಳುನಾಡು ಸರ್ಕಾರ ನೇಮಿಸಿದೆ.</p>.<p>*ಕೇಂದ್ರ ಆರೋಗ್ಯ ಸಚಿವಾಲಯ ವರ್ಗೀಕರಿಸಿದ ದೇಶಗಳ ಪ್ರಯಾಣಿಕರು ಗುಜರಾತ್ಗೆ ಬಂದಿಳಿದಾಗ, ಅವರಿಗೆ ಆರ್ಟಿಪಿಸಿಆರ್ ಪರೀಕ್ಷೆ ಕಡ್ಡಾಯ</p>.<p>*ದಕ್ಷಿಣ ಆಫ್ರಿಕಾದಿಂದ ಬರುವ ಪ್ರಯಾಣಿಕರಿಗೆ ಮುಂಬೈನಲ್ಲಿ ಕ್ವಾರಂಟೈನ್: ಮೇಯರ್ ಕಿಶೋರಿ ಪೆಡ್ನೇಕರ್</p>.<p>*ಶಬರಿಮಲೆ ಯಾತ್ರೆಯಲ್ಲಿ ಪಾಲ್ಗೊ<br />ಳ್ಳುವ ಮಕ್ಕಳಿಗೆ ಆರ್ಟಿಪಿಸಿಆರ್ ಪರೀಕ್ಷೆ ಕಡ್ಡಾಯವಲ್ಲ ಎಂದು ಕೇರಳ ಸರ್ಕಾರ ತಿಳಿಸಿದೆ. ಉಳಿದವರಿಗೆ ಎರಡೂ ಡೋಸ್ ಹಾಕಿಸಿಕೊಂಡ ಪ್ರಮಾಣಪತ್ರ ಅಥವಾ ಆರ್ಟಿಪಿಸಿಆರ್ ಪ್ರಮಾಣಪತ್ರ ಕಡ್ಡಾಯ ಮಾಡಲಾಗಿದೆ</p>.<p>*ಒಡಿಶಾದಲ್ಲಿ ಶನಿವಾರ 41 ಮಕ್ಕಳೂ ಸೇರಿದಂತೆ 264 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಮೂವರು ಮೃತಪಟ್ಟಿದ್ದಾರೆ. ಶುಕ್ರವಾರವೂ 219 ಜನರಲ್ಲಿ ಸೋಂಕು ಪತ್ತೆಯಾಗಿತ್ತು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>