<p><strong>ನವದೆಹಲಿ:</strong> ಮುಂಬೈ ಮೂಲದ ಶ್ರದ್ಧಾ ವಾಲಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ವಿಚಾರಣೆಯನ್ನು ದೆಹಲಿ ಪೊಲೀಸರು ತೀವ್ರಗೊಳಿಸಿದ್ದಾರೆ.</p>.<p>ಅಫ್ತಾಬ್ ಕಳೆದ ತಿಂಗಳು ಮುಂಜಾನೆ ತನ್ನ ಮನೆಯ ಹೊರಗೆ ಬ್ಯಾಗ್ ಹಿಡಿದುಕೊಂಡು ಹೋಗುತ್ತಿದ್ದ ದೃಶ್ಯ ಸಿಸಿಟಿವಿ ಸೆರೆಯಾಗಿದೆ. ಈ ಹಿನ್ನೆಲೆಯಲ್ಲಿ ಅಫ್ತಾಬ್, ಶ್ರದ್ಧಾಳ ಮೃತದೇಹದ ಭಾಗಗಳನ್ನು ಬ್ಯಾಗ್ನಲ್ಲಿ ತುಂಬಿಕೊಂಡು ಹೋಗುತ್ತಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.</p>.<p>ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ಅಫ್ತಾಬ್ನನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಸುದ್ದಿಸಂಸ್ಥೆ ‘ಎನ್ಡಿಟಿವಿ’ ವರದಿ ಮಾಡಿದೆ.</p>.<p>ಇಂದು ಬೆಳಿಗ್ಗೆ ಅಫ್ತಾಬ್ ಅಪಾರ್ಟ್ಮೆಂಟ್ನಲ್ಲಿ ಚೂಪಾದ ಕತ್ತರಿಸುವ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಅವುಗಳನ್ನು ಶ್ರದ್ಧಾಳ ಮೃತದೇಹವನ್ನು ಕತ್ತರಿಸಲು ಬಳಸಿರಬಹುದು ಎಂದು ಶಂಕಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಅಫ್ತಾಬ್, ತೀವ್ರ ವಿಚಾರಣೆ ಬಳಿಕ ಕೃತ್ಯದ ಬಗ್ಗೆ ಬಾಯ್ಬಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಓದಿ...<a href="https://www.prajavani.net/india-news/shraddha-first-sought-help-in-nov-2020-did-not-expect-aaftab-to-go-to-this-extent-says-her-ex-989864.html" target="_blank">ಶ್ರದ್ಧಾ ಮೇಲೆ 2020 ನವೆಂಬರ್ನಲ್ಲೇ ಹಲ್ಲೆ ಮಾಡಿದ್ದ ಅಫ್ತಾಬ್</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮುಂಬೈ ಮೂಲದ ಶ್ರದ್ಧಾ ವಾಲಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ವಿಚಾರಣೆಯನ್ನು ದೆಹಲಿ ಪೊಲೀಸರು ತೀವ್ರಗೊಳಿಸಿದ್ದಾರೆ.</p>.<p>ಅಫ್ತಾಬ್ ಕಳೆದ ತಿಂಗಳು ಮುಂಜಾನೆ ತನ್ನ ಮನೆಯ ಹೊರಗೆ ಬ್ಯಾಗ್ ಹಿಡಿದುಕೊಂಡು ಹೋಗುತ್ತಿದ್ದ ದೃಶ್ಯ ಸಿಸಿಟಿವಿ ಸೆರೆಯಾಗಿದೆ. ಈ ಹಿನ್ನೆಲೆಯಲ್ಲಿ ಅಫ್ತಾಬ್, ಶ್ರದ್ಧಾಳ ಮೃತದೇಹದ ಭಾಗಗಳನ್ನು ಬ್ಯಾಗ್ನಲ್ಲಿ ತುಂಬಿಕೊಂಡು ಹೋಗುತ್ತಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.</p>.<p>ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ಅಫ್ತಾಬ್ನನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಸುದ್ದಿಸಂಸ್ಥೆ ‘ಎನ್ಡಿಟಿವಿ’ ವರದಿ ಮಾಡಿದೆ.</p>.<p>ಇಂದು ಬೆಳಿಗ್ಗೆ ಅಫ್ತಾಬ್ ಅಪಾರ್ಟ್ಮೆಂಟ್ನಲ್ಲಿ ಚೂಪಾದ ಕತ್ತರಿಸುವ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಅವುಗಳನ್ನು ಶ್ರದ್ಧಾಳ ಮೃತದೇಹವನ್ನು ಕತ್ತರಿಸಲು ಬಳಸಿರಬಹುದು ಎಂದು ಶಂಕಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಅಫ್ತಾಬ್, ತೀವ್ರ ವಿಚಾರಣೆ ಬಳಿಕ ಕೃತ್ಯದ ಬಗ್ಗೆ ಬಾಯ್ಬಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಓದಿ...<a href="https://www.prajavani.net/india-news/shraddha-first-sought-help-in-nov-2020-did-not-expect-aaftab-to-go-to-this-extent-says-her-ex-989864.html" target="_blank">ಶ್ರದ್ಧಾ ಮೇಲೆ 2020 ನವೆಂಬರ್ನಲ್ಲೇ ಹಲ್ಲೆ ಮಾಡಿದ್ದ ಅಫ್ತಾಬ್</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>