ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮಧ್ಯಪ್ರದೇಶದ ಜೈಲಿನಲ್ಲಿರುವ ಅಪರಾಧಿಗಳಿಗೆ 30 ದಿನಗಳ ಕ್ಷಮೆಯನ್ನು ನೀಡಲಾಗುವುದು. ಅತ್ಯಾಚಾರದಂತಹ ಗಂಭೀರ ಅಪರಾಧಗಳಿಗೆ ಶಿಕ್ಷೆಗೊಳಗಾದ ಕೈದಿಗಳನ್ನು ಹೊರತುಪಡಿಸಿ, ಉಳಿದವರಿಗೆ ಇದು ಅನ್ವಯವಾಗುತ್ತದೆ ಎಂದು ಜನ್ಮಾಷ್ಟಮಿ ನಿಮಿತ್ತ ಭೋಪಾಲ್ನ ಸೆಂಟ್ರಲ್ ಜೈಲಿನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಿಶ್ರಾ ಸುದ್ದಿಗಾರರಿಗೆ ತಿಳಿಸಿದರು.