<p><strong>ನವದೆಹಲಿ:</strong>ಸದೃಢವಾದ ಹಾಗೂ ಭಾವನಾತ್ಮಕವಾಗಿ ಒಂದಾದ ಭಾರತವನ್ನು ನಿರ್ಮಿಸುವ ಕಾರ್ಯಕ್ಕೆ ಒತ್ತು ನೀಡಬೇಕು. ಈ ಕಾರ್ಯ ಆಂದೋಲನ ರೀತಿಯಲ್ಲಿ ನಡೆಯಬೇಕು ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಪ್ರತಿಪಾದಿಸಿದ್ದಾರೆ.</p>.<p>ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಮುಖ ಪಾತ್ರವಹಿಸಿದ್ದ ‘ಕ್ವಿಟ್ ಇಂಡಿಯಾ’ ಚಳವಳಿಯ 78ನೇ ವಾರ್ಷಿಕೋತ್ಸವದ ಅಂಗವಾಗಿ ಅವರು ಫೇಸ್ಬುಕ್ನಲ್ಲಿ ಭಾನುವಾರ ಲೇಖನವೊಂದನ್ನು ಪ್ರಕಟಿಸಿದ್ದಾರೆ.</p>.<p>1000 ಇಸವಿಯಿಂದ 1947ರ ವರೆಗಿನ ಇತಿಹಾಸದ ಘಟನೆಗಳನ್ನು ಮೆಲುಕು ಹಾಕಿರುವ ಅವರು, ವಿದೇಶಿಯರ ಆಕ್ರಮಣ, ವಸಾಹತುಶಾಹಿ ಕಾಲಘಟ್ಟದ ಘಟನೆಗಳ ವಿವರಗಳನ್ನೂ ಹಂಚಿಕೊಂಡಿದ್ದಾರೆ.</p>.<p>ಕಳೆದ ಎರಡು ಶತಮಾನಗಳ ಅವಧಿಯಲ್ಲಿ ಸಾಂಸ್ಕೃತಿಕವಾಗಿ ದೇಶವು ಭಾರಿ ಬೆಲೆ ತೆರಬೇಕಾಯಿತು. ದೇಶ ಆರ್ಥಿಕವಾಗಿಯೂ ಶೋಷಣೆಗೆ ಒಳಗಾಯಿತು ಎಂದು ವಿವರಿಸಿದ್ದಾರೆ.</p>.<p>‘ದೇಶವಾಸಿಗಳಲ್ಲಿ ಒಗ್ಗಟ್ಟಿನ ಕೊರತೆಯಿಂದಾಗಿ ದೇಶವು ಸತತವಾಗಿ ಶೋಷಣೆಗೆ ಒಳಗಾಗಬೇಕಾಯಿತು. ಇತಿಹಾಸದ ಈ ಘಟನೆಗಳಿಂದ ಭಾರತೀಯರು ಪಾಠ ಕಲಿಯವುದು ಅವಶ್ಯ. ನಮ್ಮ ಸಾಂಸ್ಕೃತಿಕ ಮೌಲ್ಯಗಳು ಹಾಗೂ ಪರಂಪರೆಯನ್ನು ಉಳಿಸಿಕೊಳ್ಳುವ ಜೊತೆಜೊತೆಗೆ ನಾವೆಲ್ಲಾ ಭಾರತೀಯರು ಎಂಬ ಅರಿವನ್ನು ಬೆಳೆಸಿಕೊಳ್ಳಬೇಕು’ ಎಂದೂ ಅವರು ಲೇಖನದಲ್ಲಿ ಹೇಳಿದ್ದಾರೆ.</p>.<p>‘2022ರಲ್ಲಿ ದೇಶವು 75ನೇ ಸ್ವಾತಂತ್ರ್ಯೋತ್ಸವ ಆಚರಿಸುತ್ತದೆ. ಅಷ್ಟರೊಳಗೆ ದೇಶದಲ್ಲಿನ ಭ್ರಷ್ಟಾಚಾರ, ಬಡತನ, ಅನಕ್ಷರತೆ, ಅಸಮಾನತೆ ಹಾಗೂ ಎಲ್ಲ ಬಗೆಯ ಸಾಮಾಜಿಕ ಅನಿಷ್ಟಗಳನ್ನು ನಿರ್ಮೂಲನೆ ಮಾಡುವುದಾಗಿ ಪ್ರತಿಯೊಬ್ಬ ಭಾರತೀಯರು ಪ್ರತಿಜ್ಞೆ ಮಾಡಬೇಕು’ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ಸದೃಢವಾದ ಹಾಗೂ ಭಾವನಾತ್ಮಕವಾಗಿ ಒಂದಾದ ಭಾರತವನ್ನು ನಿರ್ಮಿಸುವ ಕಾರ್ಯಕ್ಕೆ ಒತ್ತು ನೀಡಬೇಕು. ಈ ಕಾರ್ಯ ಆಂದೋಲನ ರೀತಿಯಲ್ಲಿ ನಡೆಯಬೇಕು ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಪ್ರತಿಪಾದಿಸಿದ್ದಾರೆ.</p>.<p>ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಮುಖ ಪಾತ್ರವಹಿಸಿದ್ದ ‘ಕ್ವಿಟ್ ಇಂಡಿಯಾ’ ಚಳವಳಿಯ 78ನೇ ವಾರ್ಷಿಕೋತ್ಸವದ ಅಂಗವಾಗಿ ಅವರು ಫೇಸ್ಬುಕ್ನಲ್ಲಿ ಭಾನುವಾರ ಲೇಖನವೊಂದನ್ನು ಪ್ರಕಟಿಸಿದ್ದಾರೆ.</p>.<p>1000 ಇಸವಿಯಿಂದ 1947ರ ವರೆಗಿನ ಇತಿಹಾಸದ ಘಟನೆಗಳನ್ನು ಮೆಲುಕು ಹಾಕಿರುವ ಅವರು, ವಿದೇಶಿಯರ ಆಕ್ರಮಣ, ವಸಾಹತುಶಾಹಿ ಕಾಲಘಟ್ಟದ ಘಟನೆಗಳ ವಿವರಗಳನ್ನೂ ಹಂಚಿಕೊಂಡಿದ್ದಾರೆ.</p>.<p>ಕಳೆದ ಎರಡು ಶತಮಾನಗಳ ಅವಧಿಯಲ್ಲಿ ಸಾಂಸ್ಕೃತಿಕವಾಗಿ ದೇಶವು ಭಾರಿ ಬೆಲೆ ತೆರಬೇಕಾಯಿತು. ದೇಶ ಆರ್ಥಿಕವಾಗಿಯೂ ಶೋಷಣೆಗೆ ಒಳಗಾಯಿತು ಎಂದು ವಿವರಿಸಿದ್ದಾರೆ.</p>.<p>‘ದೇಶವಾಸಿಗಳಲ್ಲಿ ಒಗ್ಗಟ್ಟಿನ ಕೊರತೆಯಿಂದಾಗಿ ದೇಶವು ಸತತವಾಗಿ ಶೋಷಣೆಗೆ ಒಳಗಾಗಬೇಕಾಯಿತು. ಇತಿಹಾಸದ ಈ ಘಟನೆಗಳಿಂದ ಭಾರತೀಯರು ಪಾಠ ಕಲಿಯವುದು ಅವಶ್ಯ. ನಮ್ಮ ಸಾಂಸ್ಕೃತಿಕ ಮೌಲ್ಯಗಳು ಹಾಗೂ ಪರಂಪರೆಯನ್ನು ಉಳಿಸಿಕೊಳ್ಳುವ ಜೊತೆಜೊತೆಗೆ ನಾವೆಲ್ಲಾ ಭಾರತೀಯರು ಎಂಬ ಅರಿವನ್ನು ಬೆಳೆಸಿಕೊಳ್ಳಬೇಕು’ ಎಂದೂ ಅವರು ಲೇಖನದಲ್ಲಿ ಹೇಳಿದ್ದಾರೆ.</p>.<p>‘2022ರಲ್ಲಿ ದೇಶವು 75ನೇ ಸ್ವಾತಂತ್ರ್ಯೋತ್ಸವ ಆಚರಿಸುತ್ತದೆ. ಅಷ್ಟರೊಳಗೆ ದೇಶದಲ್ಲಿನ ಭ್ರಷ್ಟಾಚಾರ, ಬಡತನ, ಅನಕ್ಷರತೆ, ಅಸಮಾನತೆ ಹಾಗೂ ಎಲ್ಲ ಬಗೆಯ ಸಾಮಾಜಿಕ ಅನಿಷ್ಟಗಳನ್ನು ನಿರ್ಮೂಲನೆ ಮಾಡುವುದಾಗಿ ಪ್ರತಿಯೊಬ್ಬ ಭಾರತೀಯರು ಪ್ರತಿಜ್ಞೆ ಮಾಡಬೇಕು’ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>