<p><strong>ಕಟಕ್:</strong> ಒಡಿಶಾದ ಕಟಕ್ನ ಶ್ರೀರಂಗನಾಥ ದೇವಾಲಯದ ಬಳಿ ಮಕರ ಮೇಳದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮಹಿಳೆ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.</p>.<p>ಕಾಲ್ತುಳಿತದಲ್ಲಿ ಮೃತಪಟ್ಟ ಮಹಿಳೆಯನ್ನು ಅಂಜನಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ ನಾಲ್ವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.</p>.<p>ರಂಗನಾಥ ದೇವರ ದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರಿಂದ ಈ ವೇಳೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ದೇವಾಲಯದ ಆವರಣದಲ್ಲಿ ಸೂಕ್ತ ನಿರ್ವಹಣೆ ಇಲ್ಲದಿರುವುದೇ ಘಟನೆಗೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.</p>.<p>ಕೋವಿಡ್ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದ ಮಕರ ಮೇಳಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಹೀಗಾಗಿ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬಂದಿದ್ದರು ಎಂದು ದೇವಾಲಯದ ಸಿಬ್ಬಂದಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಟಕ್:</strong> ಒಡಿಶಾದ ಕಟಕ್ನ ಶ್ರೀರಂಗನಾಥ ದೇವಾಲಯದ ಬಳಿ ಮಕರ ಮೇಳದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮಹಿಳೆ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.</p>.<p>ಕಾಲ್ತುಳಿತದಲ್ಲಿ ಮೃತಪಟ್ಟ ಮಹಿಳೆಯನ್ನು ಅಂಜನಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ ನಾಲ್ವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.</p>.<p>ರಂಗನಾಥ ದೇವರ ದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರಿಂದ ಈ ವೇಳೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ದೇವಾಲಯದ ಆವರಣದಲ್ಲಿ ಸೂಕ್ತ ನಿರ್ವಹಣೆ ಇಲ್ಲದಿರುವುದೇ ಘಟನೆಗೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.</p>.<p>ಕೋವಿಡ್ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದ ಮಕರ ಮೇಳಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಹೀಗಾಗಿ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬಂದಿದ್ದರು ಎಂದು ದೇವಾಲಯದ ಸಿಬ್ಬಂದಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>