‘ಭದ್ರಾದ್ರಿ ಕೊಥಗುಡೆಮ್ ಪ್ರದೇಶದಲ್ಲಿ ಪೊಲೀಸರ ವಿಶೇಷ ಪಡೆಯು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಬೆಳಿಗ್ಗೆ 8.15ರ ಸುಮಾರಿಗೆ ನಿಷೇಧಿತ ಸಿಪಿಐ (ಮಾವೋವಾದಿ) ಸಂಘಟನೆಯ ಸದಸ್ಯರು ಮೊದಲು ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪೊಲೀಸ್ ಸಿಬ್ಬಂದಿ ಪ್ರತ್ಯುತ್ತರ ನೀಡಿದ್ದಾರೆ. ಈ ವೇಳೆ ಒಬ್ಬ ಮಾವೋವಾದಿ ಮೃತಪಟ್ಟಿದ್ದಾನೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.