<p><strong>ಜಮ್ಮು:</strong> ‘ಸುಧಾರಿತ ಸ್ಫೋಟಕ ಸಾಧನ (ಐಇಡಿ) ಪತ್ತೆ ಪ್ರಕರಣದಡಿ ಅಲ್–ಬದರ್ ಸಂಘಟನೆಯ ಕಾರ್ಯಕರ್ತನೊಬ್ಬನನ್ನು ಬಂಧಿಸಲಾಗಿದೆ’ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದರು.</p>.<p>ಫೆಬ್ರುವರಿ 13 ರಂದು ಜಮ್ಮು ಬಸ್ ನಿಲ್ದಾಣದಲ್ಲಿ ನರ್ಸಿಂಗ್ ವಿದ್ಯಾರ್ಥಿ ಬಳಿಯಿಂದ 7 ಕೆ.ಜಿಯ ಐಇಡಿ ಸಿಕ್ಕಿತ್ತು. 2019ರಲ್ಲಿ ಫೆಬ್ರುವರಿ 14ರಂದು ನಡೆದ ಪುಲ್ವಾಮ ದಾಳಿಯ ಎರಡನೇ ವರ್ಷಾಚರಣೆ ಸಂದರ್ಭದಲ್ಲಿ ಶ್ರೀನಗರದಲ್ಲಿ ದಾಳಿ ನಡೆಸಲು ಸಂಚು ರೂಪಿಸಲಾಗಿತ್ತು.</p>.<p>‘ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯ ಬಾತ್ಬಾಗ್–ಹನಿಪೊರ ಗ್ರಾಮದ ನಿವಾಸಿ ರಹ್ ಹುಸೈನ್ ಭಟ್ನನ್ನು ಬಂಧಿಸಲಾಗಿದೆ. ಈತ ಅಲ್–ಬದರ್ ಸಂಘಟನೆಯ ಕಾರ್ಯಕರ್ತ. ಈತ ಈ ಉಗ್ರ ಸಂಘಟನೆಯ ಸದಸ್ಯರಿಗೆ ಕಾರ್ಯಾಚರಣೆಗೆ ಬೇಕಾದ ಅಗತ್ಯ ವಸ್ತುಗಳನ್ನು ಒದಗಿಸುತ್ತಿದ್ದ. ಈತನಿಗೆ ರಘುನಾಥ್ ಮಂದಿರ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣದಲ್ಲಿ ದಾಳಿ ನಡೆಸಲು ಸೂಚನೆ ನೀಡಲಾಗಿತ್ತು’ ಎಂದು ಜಮ್ಮುವಿನ ಹಿರಿಯಪೊಲೀಸ್ ಅಧಿಕಾರಿ ಮುಖೇಶ್ ಸಿಂಗ್ ಅವರು ತಿಳಿಸಿದರು.</p>.<p>ಈ ಪ್ರಕರಣದಲ್ಲಿ ಈವರೆಗೆ ಒಟ್ಟು ಐವರು ಬಂಧಿಸಲಾಗಿದೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು:</strong> ‘ಸುಧಾರಿತ ಸ್ಫೋಟಕ ಸಾಧನ (ಐಇಡಿ) ಪತ್ತೆ ಪ್ರಕರಣದಡಿ ಅಲ್–ಬದರ್ ಸಂಘಟನೆಯ ಕಾರ್ಯಕರ್ತನೊಬ್ಬನನ್ನು ಬಂಧಿಸಲಾಗಿದೆ’ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದರು.</p>.<p>ಫೆಬ್ರುವರಿ 13 ರಂದು ಜಮ್ಮು ಬಸ್ ನಿಲ್ದಾಣದಲ್ಲಿ ನರ್ಸಿಂಗ್ ವಿದ್ಯಾರ್ಥಿ ಬಳಿಯಿಂದ 7 ಕೆ.ಜಿಯ ಐಇಡಿ ಸಿಕ್ಕಿತ್ತು. 2019ರಲ್ಲಿ ಫೆಬ್ರುವರಿ 14ರಂದು ನಡೆದ ಪುಲ್ವಾಮ ದಾಳಿಯ ಎರಡನೇ ವರ್ಷಾಚರಣೆ ಸಂದರ್ಭದಲ್ಲಿ ಶ್ರೀನಗರದಲ್ಲಿ ದಾಳಿ ನಡೆಸಲು ಸಂಚು ರೂಪಿಸಲಾಗಿತ್ತು.</p>.<p>‘ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯ ಬಾತ್ಬಾಗ್–ಹನಿಪೊರ ಗ್ರಾಮದ ನಿವಾಸಿ ರಹ್ ಹುಸೈನ್ ಭಟ್ನನ್ನು ಬಂಧಿಸಲಾಗಿದೆ. ಈತ ಅಲ್–ಬದರ್ ಸಂಘಟನೆಯ ಕಾರ್ಯಕರ್ತ. ಈತ ಈ ಉಗ್ರ ಸಂಘಟನೆಯ ಸದಸ್ಯರಿಗೆ ಕಾರ್ಯಾಚರಣೆಗೆ ಬೇಕಾದ ಅಗತ್ಯ ವಸ್ತುಗಳನ್ನು ಒದಗಿಸುತ್ತಿದ್ದ. ಈತನಿಗೆ ರಘುನಾಥ್ ಮಂದಿರ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣದಲ್ಲಿ ದಾಳಿ ನಡೆಸಲು ಸೂಚನೆ ನೀಡಲಾಗಿತ್ತು’ ಎಂದು ಜಮ್ಮುವಿನ ಹಿರಿಯಪೊಲೀಸ್ ಅಧಿಕಾರಿ ಮುಖೇಶ್ ಸಿಂಗ್ ಅವರು ತಿಳಿಸಿದರು.</p>.<p>ಈ ಪ್ರಕರಣದಲ್ಲಿ ಈವರೆಗೆ ಒಟ್ಟು ಐವರು ಬಂಧಿಸಲಾಗಿದೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>