‘ಜನವರಿ 26ರಂದು ರೈತರ ಟ್ಯ್ರಾಕ್ಟರ್ ರ್ಯಾಲಿ ವೇಳೆ ನಡೆದ ಹಿಂಸಾಚಾರದ ಬಳಿಕ ಈ ಭಾಗದಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿತ್ತು. ಇದೀಗ ದೆಹಲಿಯಿಂದ ಗಾಜಿಯಾಬಾದ್ನತ್ತ ಹೋಗುವ ರಸ್ತೆಯನ್ನು ತೆರೆಯಲಾಗಿದ್ದು, ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ. ಆದರೆ, ರಸ್ತೆಯ ಇತರ ಭಾಗಗಳಲ್ಲಿ ಈಗಲೂ ಪ್ರವೇಶವನ್ನು ನಿರ್ಬಂಧಿಸಲಾಗಿದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.