<p><strong>ಜಮ್ಮು:</strong> ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿನಿಯಂತ್ರಣ ರೇಖೆಯೊಳಗೆ (ಎಲ್ಒಸಿ) ನುಸುಳಲು ಯತ್ನಿಸಿದ್ದ ಉಗ್ರನನ್ನು ಹತ್ಯೆ ಮಾಡಲಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಭಾರತೀಯ ಸೇನೆಯು ಭಾನುವಾರ ಹೇಳಿದೆ.</p>.<p>‘ಕೃಷ್ಣ ಘಾಟಿ ಸೆಕ್ಟರ್ನಲ್ಲಿ ಶುಕ್ರವಾರ ಉಗ್ರರ ಗುಂಪೊಂದು ಗಡಿಯೊಳಗೆ ಅಕ್ರಮವಾಗಿ ನುಸುಳು ಯತ್ನಿಸುತ್ತಿರುವುದನ್ನು ಭಾರತೀಯ ಸೇನೆಯು ತಡೆಗಟ್ಟಿತ್ತು. ಈ ಸಂದರ್ಭದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರನೊಬ್ಬ ಸ್ಥಳದಲ್ಲೇ ಸಾವಿಗೀಡಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಡಿಯಲ್ಲಿ ಪಾಕಿಸ್ತಾನದ ಕೃತ್ಯಗಳನ್ನು ಸೇನೆಯು ವಿಫಲಗೊಳಿಸುವಲ್ಲಿ ಸಫಲವಾಗಿದ್ದು, ಗಡಿಯುದ್ದಕ್ಕೂ ಭದ್ರತಾ ಪಡೆ ಎಚ್ಚರಿಕೆ ವಹಿಸಿದೆ’ ಎಂದು ಜಮ್ಮು–ಕಾಶ್ಮೀರದ (ರಕ್ಷಣಾ) ಲೆಫ್ಟಿನೆಂಟ್ ಕರ್ನಲ್ ದೇವೇಂದರ್ ಆನಂದ್ ತಿಳಿಸಿದ್ದಾರೆ.</p>.<p>‘ನಂತರ ನಡೆದ ಶೋಧ ಕಾರ್ಯಾಚರಣೆಯಲ್ಲಿ ಉಗ್ರನ ಮೃತದೇಹವನ್ನು ಘಟನಾ ಸ್ಥಳದಿಂದ ಎಳೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳದಲ್ಲಿ ಒಂದು ಎಕೆ–47 ರೈಫಲ್, ಎರಡು–47 ನಿಯತಕಾಲಿಕೆಗಳು ಮತ್ತು ಕೆಲ ಆಹಾರದ ಸಾಮಾಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಸೇನಾ ವಕ್ತಾರರು ಮಾಹಿತಿ ನೀಡಿದ್ದಾರೆ.</p>.<p>‘ಘಟನಾ ಸ್ಥಳದಲ್ಲಿ ದೊರೆತೆ ಆಹಾರ ಸಾಮಗ್ರಿ ಮತ್ತು ಇತರ ವಸ್ತುಗಳ ಮೇಲೆ ಪಾಕಿಸ್ತಾನದ ಗುರುತುಗಳಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಚಟುವಟಿಕೆಗಳಿಗೆ ಪಾಕಿಸ್ತಾನವು ಪ್ರೋತ್ಸಾಹ ನೀಡುತ್ತಿರುವುದನ್ನು ಇದು ತೋರಿಸುತ್ತದೆ’ ಎಂದೂ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು:</strong> ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿನಿಯಂತ್ರಣ ರೇಖೆಯೊಳಗೆ (ಎಲ್ಒಸಿ) ನುಸುಳಲು ಯತ್ನಿಸಿದ್ದ ಉಗ್ರನನ್ನು ಹತ್ಯೆ ಮಾಡಲಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಭಾರತೀಯ ಸೇನೆಯು ಭಾನುವಾರ ಹೇಳಿದೆ.</p>.<p>‘ಕೃಷ್ಣ ಘಾಟಿ ಸೆಕ್ಟರ್ನಲ್ಲಿ ಶುಕ್ರವಾರ ಉಗ್ರರ ಗುಂಪೊಂದು ಗಡಿಯೊಳಗೆ ಅಕ್ರಮವಾಗಿ ನುಸುಳು ಯತ್ನಿಸುತ್ತಿರುವುದನ್ನು ಭಾರತೀಯ ಸೇನೆಯು ತಡೆಗಟ್ಟಿತ್ತು. ಈ ಸಂದರ್ಭದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರನೊಬ್ಬ ಸ್ಥಳದಲ್ಲೇ ಸಾವಿಗೀಡಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಡಿಯಲ್ಲಿ ಪಾಕಿಸ್ತಾನದ ಕೃತ್ಯಗಳನ್ನು ಸೇನೆಯು ವಿಫಲಗೊಳಿಸುವಲ್ಲಿ ಸಫಲವಾಗಿದ್ದು, ಗಡಿಯುದ್ದಕ್ಕೂ ಭದ್ರತಾ ಪಡೆ ಎಚ್ಚರಿಕೆ ವಹಿಸಿದೆ’ ಎಂದು ಜಮ್ಮು–ಕಾಶ್ಮೀರದ (ರಕ್ಷಣಾ) ಲೆಫ್ಟಿನೆಂಟ್ ಕರ್ನಲ್ ದೇವೇಂದರ್ ಆನಂದ್ ತಿಳಿಸಿದ್ದಾರೆ.</p>.<p>‘ನಂತರ ನಡೆದ ಶೋಧ ಕಾರ್ಯಾಚರಣೆಯಲ್ಲಿ ಉಗ್ರನ ಮೃತದೇಹವನ್ನು ಘಟನಾ ಸ್ಥಳದಿಂದ ಎಳೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳದಲ್ಲಿ ಒಂದು ಎಕೆ–47 ರೈಫಲ್, ಎರಡು–47 ನಿಯತಕಾಲಿಕೆಗಳು ಮತ್ತು ಕೆಲ ಆಹಾರದ ಸಾಮಾಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಸೇನಾ ವಕ್ತಾರರು ಮಾಹಿತಿ ನೀಡಿದ್ದಾರೆ.</p>.<p>‘ಘಟನಾ ಸ್ಥಳದಲ್ಲಿ ದೊರೆತೆ ಆಹಾರ ಸಾಮಗ್ರಿ ಮತ್ತು ಇತರ ವಸ್ತುಗಳ ಮೇಲೆ ಪಾಕಿಸ್ತಾನದ ಗುರುತುಗಳಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಚಟುವಟಿಕೆಗಳಿಗೆ ಪಾಕಿಸ್ತಾನವು ಪ್ರೋತ್ಸಾಹ ನೀಡುತ್ತಿರುವುದನ್ನು ಇದು ತೋರಿಸುತ್ತದೆ’ ಎಂದೂ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>