‘ಕೃಷ್ಣ ಘಾಟಿ ಸೆಕ್ಟರ್ನಲ್ಲಿ ಶುಕ್ರವಾರ ಉಗ್ರರ ಗುಂಪೊಂದು ಗಡಿಯೊಳಗೆ ಅಕ್ರಮವಾಗಿ ನುಸುಳು ಯತ್ನಿಸುತ್ತಿರುವುದನ್ನು ಭಾರತೀಯ ಸೇನೆಯು ತಡೆಗಟ್ಟಿತ್ತು. ಈ ಸಂದರ್ಭದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರನೊಬ್ಬ ಸ್ಥಳದಲ್ಲೇ ಸಾವಿಗೀಡಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಡಿಯಲ್ಲಿ ಪಾಕಿಸ್ತಾನದ ಕೃತ್ಯಗಳನ್ನು ಸೇನೆಯು ವಿಫಲಗೊಳಿಸುವಲ್ಲಿ ಸಫಲವಾಗಿದ್ದು, ಗಡಿಯುದ್ದಕ್ಕೂ ಭದ್ರತಾ ಪಡೆ ಎಚ್ಚರಿಕೆ ವಹಿಸಿದೆ’ ಎಂದು ಜಮ್ಮು–ಕಾಶ್ಮೀರದ (ರಕ್ಷಣಾ) ಲೆಫ್ಟಿನೆಂಟ್ ಕರ್ನಲ್ ದೇವೇಂದರ್ ಆನಂದ್ ತಿಳಿಸಿದ್ದಾರೆ.