‘ಒಂದು ವೇಳೆ ಭಾರತೀಯ ನೌಕಾಪಡೆ ಮತ್ತು ಕರಾವಳಿ ಪಡೆ ಶೋಧ ಕಾರ್ಯಾಚರಣೆ ಆರಂಭಿಸದಿದ್ದಲ್ಲಿ ಎಲ್ಲಾ ಸಿಬ್ಬಂದಿ ಸಮುದ್ರದಲ್ಲಿ ಮುಳುಗುತ್ತಿದ್ದರು. ಈ ಕಾರ್ಮಿಕರು ಖಾಸಗಿ ಸಂಸ್ಥೆಗಳಿಗೆ ಸೇರಿದ್ದವರು ಆಗಿರಬಹುದು. ಆದರೆ ಅವರೆಲ್ಲರೂ ಒಎನ್ಜಿಸಿಗಾಗಿ ಕೆಲಸ ಮಾಡುತ್ತಿದ್ದರು. ಪಶ್ಚಿಮ ಕರಾವಳಿಯ ಎಲ್ಲಾ ರಾಜ್ಯಗಳು ಚಂಡಮಾರುತಕ್ಕಾಗಿ ಸಿದ್ಧತೆಗಳನ್ನು ಮಾಡುತ್ತಿದ್ದರೂ ಒಎನ್ಜಿಸಿ ಮಾತ್ರ ಚಂಡಮಾರುತ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ’ ಎಂದುಸಂಪಾದಕೀಯದಲ್ಲಿ ಟೀಕಿಸಲಾಗಿದೆ.