<p><strong>ನವದೆಹಲಿ:</strong> ಕೇಂದ್ರ ಸರ್ಕಾರಿ ನೌಕರಿ ಆಯ್ಕೆಗಾಗಿ ಮುಂದಿನ ವರ್ಷದಿಂದ ದೇಶದಾದ್ಯಂತ ಆನ್ಲೈನ್ ಮುಖಾಂತರ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ನಡೆಸಲಾಗುವುದು ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಸೋಮವಾರ ಹೇಳಿದರು.</p>.<p>ಸರ್ಕಾರಿ ನೌಕರಿಗೆ ಸೇರಲು ಬಯಸುವ ಯುವ ಜನರಿಗೆ ಈ ಪರೀಕ್ಷೆ ವರವಾಗಲಿದೆ ಎಂದು ಅವರು ಹೇಳಿದರು.</p>.<p>‘ಸಿಇಟಿ ನಡೆಸಲು ಕೇಂದ್ರ ಸಚಿವ ಸಂಪುಟದ ಅನುಮತಿ ಪಡೆದು ರಾಷ್ಟ್ರೀಯ ನೇಮಕಾತಿ ಏಜೆನ್ಸಿಯನ್ನು(ಎನ್ಆರ್ಎ) ರಚಿಸಲಾಗಿದೆ. ಗ್ರೂಪ್–ಬಿ ಮತ್ತು ಗ್ರೂಪ್–ಸಿ (ತಾಂತ್ರಿಕೇತರ) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಎನ್ಆರ್ಎ ಈ ಪರೀಕ್ಷೆ ನಡೆಸಲಿದೆ. ಸಿಇಟಿಯು, ಉದ್ಯೋಗಕ್ಕಾಗಿ ಪ್ರಾಥಮಿಕ ಹಂತದ ಆಯ್ಕೆ ಪ್ರಕ್ರಿಯೆ ಆಗಿರಲಿದೆ’ ಎಂದರು.</p>.<p>‘ಈ ಸುಧಾರಣೆಯಿಂದಾಗಿ, ದೇಶದ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಒಂದು ಪರೀಕ್ಷಾ ಕೇಂದ್ರವಿರಲಿದೆ. ಇದರಿಂದಾಗಿ ಹಳ್ಳಿಗಳಿಂದ ಬರುವ ಅಭ್ಯರ್ಥಿಗಳಿಗೂ ಅನುಕೂಲವಾಗಲಿದೆ. ದೂರದ ಊರುಗಳಲ್ಲಿ ಇರುವ ಪರೀಕ್ಷಾ ಕೇಂದ್ರಕ್ಕೆ ಹೋಗಲು ಸಾಧ್ಯವಾಗದೇ ಇದ್ದ ಮಹಿಳೆಯರು, ಅಂಗವಿಕಲರು ಹಾಗೂ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಅಭ್ಯರ್ಥಿಗಳಿಗೂ ಇದು ಸಹಕಾರಿಯಾಗಲಿದೆ’ ಎಂದು ವಿವರಿಸಿದರು.</p>.<p>2021 ಜೂನ್ ನಂತರದಲ್ಲಿ ಎನ್ಆರ್ಎ ಮೊದಲ ಸಿಇಟಿ ನಡೆಸುವ ಸಾಧ್ಯತೆ ಇದೆ. ಹೀಗಿದ್ದರೂ, ಪ್ರಸ್ತುತ ಇರುವ ಏಜೆನ್ಸಿಗಳಾದ ಎಸ್ಎಸ್ಸಿ, ಆರ್ಆರ್ಬಿ ಹಾಗೂ ಐಬಿಪಿಎಸ್ಗಳು ಅಗತ್ಯತೆಗೆ ತಕ್ಕಂತೆ ನೇಮಕಾತಿಯನ್ನು ನಡೆಸಲಿವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೇಂದ್ರ ಸರ್ಕಾರಿ ನೌಕರಿ ಆಯ್ಕೆಗಾಗಿ ಮುಂದಿನ ವರ್ಷದಿಂದ ದೇಶದಾದ್ಯಂತ ಆನ್ಲೈನ್ ಮುಖಾಂತರ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ನಡೆಸಲಾಗುವುದು ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಸೋಮವಾರ ಹೇಳಿದರು.</p>.<p>ಸರ್ಕಾರಿ ನೌಕರಿಗೆ ಸೇರಲು ಬಯಸುವ ಯುವ ಜನರಿಗೆ ಈ ಪರೀಕ್ಷೆ ವರವಾಗಲಿದೆ ಎಂದು ಅವರು ಹೇಳಿದರು.</p>.<p>‘ಸಿಇಟಿ ನಡೆಸಲು ಕೇಂದ್ರ ಸಚಿವ ಸಂಪುಟದ ಅನುಮತಿ ಪಡೆದು ರಾಷ್ಟ್ರೀಯ ನೇಮಕಾತಿ ಏಜೆನ್ಸಿಯನ್ನು(ಎನ್ಆರ್ಎ) ರಚಿಸಲಾಗಿದೆ. ಗ್ರೂಪ್–ಬಿ ಮತ್ತು ಗ್ರೂಪ್–ಸಿ (ತಾಂತ್ರಿಕೇತರ) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಎನ್ಆರ್ಎ ಈ ಪರೀಕ್ಷೆ ನಡೆಸಲಿದೆ. ಸಿಇಟಿಯು, ಉದ್ಯೋಗಕ್ಕಾಗಿ ಪ್ರಾಥಮಿಕ ಹಂತದ ಆಯ್ಕೆ ಪ್ರಕ್ರಿಯೆ ಆಗಿರಲಿದೆ’ ಎಂದರು.</p>.<p>‘ಈ ಸುಧಾರಣೆಯಿಂದಾಗಿ, ದೇಶದ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಒಂದು ಪರೀಕ್ಷಾ ಕೇಂದ್ರವಿರಲಿದೆ. ಇದರಿಂದಾಗಿ ಹಳ್ಳಿಗಳಿಂದ ಬರುವ ಅಭ್ಯರ್ಥಿಗಳಿಗೂ ಅನುಕೂಲವಾಗಲಿದೆ. ದೂರದ ಊರುಗಳಲ್ಲಿ ಇರುವ ಪರೀಕ್ಷಾ ಕೇಂದ್ರಕ್ಕೆ ಹೋಗಲು ಸಾಧ್ಯವಾಗದೇ ಇದ್ದ ಮಹಿಳೆಯರು, ಅಂಗವಿಕಲರು ಹಾಗೂ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಅಭ್ಯರ್ಥಿಗಳಿಗೂ ಇದು ಸಹಕಾರಿಯಾಗಲಿದೆ’ ಎಂದು ವಿವರಿಸಿದರು.</p>.<p>2021 ಜೂನ್ ನಂತರದಲ್ಲಿ ಎನ್ಆರ್ಎ ಮೊದಲ ಸಿಇಟಿ ನಡೆಸುವ ಸಾಧ್ಯತೆ ಇದೆ. ಹೀಗಿದ್ದರೂ, ಪ್ರಸ್ತುತ ಇರುವ ಏಜೆನ್ಸಿಗಳಾದ ಎಸ್ಎಸ್ಸಿ, ಆರ್ಆರ್ಬಿ ಹಾಗೂ ಐಬಿಪಿಎಸ್ಗಳು ಅಗತ್ಯತೆಗೆ ತಕ್ಕಂತೆ ನೇಮಕಾತಿಯನ್ನು ನಡೆಸಲಿವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>