<p><strong>ನವದೆಹಲಿ:</strong> ಕರ್ನಾಟಕದಲ್ಲಿರುವ 1.28 ಕೋಟಿ ಹೆಕ್ಟೇರ್ ಕೃಷಿ ಭೂಮಿಯ ಪೈಕಿ 40.32 ಲಕ್ಷ ಹೆಕ್ಟೇರ್ನಲ್ಲಿ ಮಾತ್ರ ನೀರಾವರಿ ವ್ಯವಸ್ಥೆ ಇದೆ ಎಂದು ಶುಕ್ರವಾರ ರಾಜ್ಯಸಭೆಗೆ ತಿಳಿಸಲಾಗಿದೆ.</p>.<p>ಬಿಜೆಪಿಯ ಕೆ.ಸಿ.ರಾಮಮೂರ್ತಿ ಅವರಿಗೆ ಲಿಖಿತ ಉತ್ತರ ನೀಡಿದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ದೇಶದಲ್ಲಿರುವ 18.09 ಕೋಟಿ ಹೆಕ್ಟೇರ್ ಕೃಷಿ ಭೂಮಿಯ ಪೈಕಿ 7.15 ಕೋಟಿ ಹೆಕ್ಟೇರ್ಗೆ ಮಾತ್ರ ನೀರಾವರಿ ಸೌಲಭ್ಯ ಇದೆ ಎಂದು ಹೇಳಿದ್ದಾರೆ.</p>.<p>ಕೃಷಿ ರಾಜ್ಯ ಪಟ್ಟಿಯಲ್ಲಿರುವುದರಿಂದ ನೀರಾವರಿ ಮತ್ತು ಜಲಸಂಪನ್ಮೂಲಕ್ಕೆ ಸಂಬಂಧಿಸಿದ ಕೆಲಸಗಳನ್ನು ರಾಜ್ಯ ಸರ್ಕಾರಗಳೇ ತಮ್ಮ ಸಂಪನ್ಮೂಲ ಬಳಸಿ ಮಾಡುತ್ತಿವೆ ಎಂದು ಸಚಿವರು ತಿಳಿಸಿದ್ದಾರೆ.</p>.<p>ಜಲಸಂಪನ್ಮೂಲಗಳ ದಕ್ಷ ನಿರ್ವಹಣೆಗಾಗಿ ಕೇಂದ್ರವು ತಾಂತ್ರಿಕ ಮತ್ತು ಹಣಕಾಸಿನ ನೆರವು ನೀಡುತ್ತಿದೆ. ಪ್ರಧಾನಮಂತ್ರಿ ಕೃಷಿ ಸಂಚಾಯಿ ಯೋಜನೆ (ಪಿಎಂಕೆಎಸ್ವೈ) ಇಂತಹ ಯೋಜನೆಗಳಲ್ಲಿ ಒಂದು. ಕರ್ನಾಟಕಕ್ಕೆ ಈ ಯೋಜನೆ ಅಡಿಯಲ್ಲಿ 2015–16 ಮತ್ತು 2020–21ರ ನಡುವೆ ₹ 2,000.15 ಕೋಟಿ ಬಿಡುಗಡೆ ಮಾಡಲಾಗಿದೆ. 2021–22ರಲ್ಲಿ ₹ 300 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕರ್ನಾಟಕದಲ್ಲಿರುವ 1.28 ಕೋಟಿ ಹೆಕ್ಟೇರ್ ಕೃಷಿ ಭೂಮಿಯ ಪೈಕಿ 40.32 ಲಕ್ಷ ಹೆಕ್ಟೇರ್ನಲ್ಲಿ ಮಾತ್ರ ನೀರಾವರಿ ವ್ಯವಸ್ಥೆ ಇದೆ ಎಂದು ಶುಕ್ರವಾರ ರಾಜ್ಯಸಭೆಗೆ ತಿಳಿಸಲಾಗಿದೆ.</p>.<p>ಬಿಜೆಪಿಯ ಕೆ.ಸಿ.ರಾಮಮೂರ್ತಿ ಅವರಿಗೆ ಲಿಖಿತ ಉತ್ತರ ನೀಡಿದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ದೇಶದಲ್ಲಿರುವ 18.09 ಕೋಟಿ ಹೆಕ್ಟೇರ್ ಕೃಷಿ ಭೂಮಿಯ ಪೈಕಿ 7.15 ಕೋಟಿ ಹೆಕ್ಟೇರ್ಗೆ ಮಾತ್ರ ನೀರಾವರಿ ಸೌಲಭ್ಯ ಇದೆ ಎಂದು ಹೇಳಿದ್ದಾರೆ.</p>.<p>ಕೃಷಿ ರಾಜ್ಯ ಪಟ್ಟಿಯಲ್ಲಿರುವುದರಿಂದ ನೀರಾವರಿ ಮತ್ತು ಜಲಸಂಪನ್ಮೂಲಕ್ಕೆ ಸಂಬಂಧಿಸಿದ ಕೆಲಸಗಳನ್ನು ರಾಜ್ಯ ಸರ್ಕಾರಗಳೇ ತಮ್ಮ ಸಂಪನ್ಮೂಲ ಬಳಸಿ ಮಾಡುತ್ತಿವೆ ಎಂದು ಸಚಿವರು ತಿಳಿಸಿದ್ದಾರೆ.</p>.<p>ಜಲಸಂಪನ್ಮೂಲಗಳ ದಕ್ಷ ನಿರ್ವಹಣೆಗಾಗಿ ಕೇಂದ್ರವು ತಾಂತ್ರಿಕ ಮತ್ತು ಹಣಕಾಸಿನ ನೆರವು ನೀಡುತ್ತಿದೆ. ಪ್ರಧಾನಮಂತ್ರಿ ಕೃಷಿ ಸಂಚಾಯಿ ಯೋಜನೆ (ಪಿಎಂಕೆಎಸ್ವೈ) ಇಂತಹ ಯೋಜನೆಗಳಲ್ಲಿ ಒಂದು. ಕರ್ನಾಟಕಕ್ಕೆ ಈ ಯೋಜನೆ ಅಡಿಯಲ್ಲಿ 2015–16 ಮತ್ತು 2020–21ರ ನಡುವೆ ₹ 2,000.15 ಕೋಟಿ ಬಿಡುಗಡೆ ಮಾಡಲಾಗಿದೆ. 2021–22ರಲ್ಲಿ ₹ 300 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>