ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ ಗೆಲ್ಲಲೆಂದು ಬಯಸುವೆ: ಆಜಾದ್‌

Last Updated 6 ನವೆಂಬರ್ 2022, 13:31 IST
ಅಕ್ಷರ ಗಾತ್ರ

ಶ್ರೀನಗರ: ಗುಜರಾತ್‌ ಮತ್ತು ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಲೆಂದು ನಾನು ಈಗಲೂ ಬಯಸುತ್ತೇನೆ ಎಂದು ಹೇಳುವ ಮೂಲಕ ‘ಡೆಮಾಕ್ರಟಿಕ್ ಆಜಾದ್ ಪಾರ್ಟಿ’ಯ ಸಂಸ್ಥಾಪ ಗುಲಾಂ ನಬಿ ಆಜಾದ್‌ ಅಚ್ಚರಿ ಮೂಡಿಸಿದ್ದಾರೆ.

ಗುಲಾಂ ನಬಿ ಆಜಾದ್‌ ಅವರು ಇತ್ತೀಚೆಗೆ ಕಾಂಗ್ರೆಸ್‌ ತೊರೆದು ಹೊಸ ಪಕ್ಷ ಸ್ಥಾಪನೆ ಮಾಡಿದ್ದರು. ಕಾಂಗ್ರೆಸ್‌ನ ವಿರುದ್ಧ ಹಲವು ಟೀಕೆಗಳನ್ನು ಮಾಡಿದ್ದ ಅವರು ಇದೀಗ ಗುಜರಾತ್‌, ಹಿಮಾಚಲ ಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ಮಾತೃ ಪಕ್ಷದ ಪರ ಮಾತನಾಡಿದ್ದಾರೆ.

ಭಾನುವಾರ ಶ್ರೀನಗರದಲ್ಲಿ ಮಾತನಾಡಿರುವ ಅವರು, ’ನಾನು ಕಾಂಗ್ರೆಸ್‌ನಿಂದ ಬೇರ್ಪಟ್ಟಿದ್ದರೂ ಎಂದೂ ಅದರ ಜಾತ್ಯತೀತ ಸಿದ್ಧಾಂತದ ವಿರುದ್ಧ ಇರಲಿಲ್ಲ. ಪಕ್ಷದ ವ್ಯವಸ್ಥೆ ದುರ್ಬಲವಾಗುತ್ತಿದ್ದರಿಂದ ನಾನು ಬೇರ್ಪಟ್ಟೆ. ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಉತ್ತಮ ಪ್ರದರ್ಶನ ನೀಡಬೇಕೆಂದು ನಾನು ಬಯಸುತ್ತೇನೆ. ಅಲ್ಲಿ ಆಮ್‌ ಆದ್ಮಿ ಪಕ್ಷ (ಎಎಪಿ) ಗೆಲ್ಲಲು ಸಾಧ್ಯವಿಲ್ಲ ಎಂದು ಗುಲಾಂ ನಬಿ ಆಜಾದ್ ಹೇಳಿದ್ದಾರೆ.

‘ಎಎಪಿಯು ಕೇಂದ್ರಾಡಳಿತ ಪ್ರದೇಶವಾದ ದೆಹಲಿಯ ಪಕ್ಷ ಮಾತ್ರ. ಅವರು ಪಂಜಾಬ್ ಅನ್ನು ಸಮರ್ಥವಾಗಿ ನಡೆಸಲು ಸಾಧ್ಯವಿಲ್ಲ. ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಸವಾಲು ಹಾಕಲು ಕಾಂಗ್ರೆಸ್ ಮಾತ್ರ ಸಾಧ್ಯ, ಏಕೆಂದರೆ ಎಲ್ಲರನ್ನೂ ಒಳಗೊಳ್ಳುವ ನೀತಿಯನ್ನು ಕಾಂಗ್ರೆಸ್‌ ಹೊಂದಿದೆ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT