<p><strong>ನವದೆಹಲಿ: </strong>ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಕಾಂಗ್ರೆಸ್ ಹಿರಿಯ ಮುಖಂಡ ಪಿ. ಚಿದಂಬರಂ ಅವರು ಶನಿವಾರ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ‘ಲಾಕ್ಡೌನ್ ಕಾರ್ಯತಂತ್ರದ ಲಾಭ ಪಡೆಯದ ಏಕೈಕ ದೇಶ ಭಾರತವಾಗಿದೆ’ ಎಂದು ಟೀಕಿಸಿದ್ದಾರೆ.</p>.<p>ಅಲ್ಲದೆ, ಸೆಪ್ಟೆಂಬರ್ ಅಂತ್ಯದವೇಳೆಗೆ ಭಾರತದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 65 ಲಕ್ಷ ತಲುಪುವ ಸಾಧ್ಯತೆ ಇದೆ ಎಂದು ಅವರು ಅಂದಾಜಿಸಿದ್ದಾರೆ.</p>.<p>ದೇಶದಲ್ಲಿ ಶನಿವಾರ ಕೋವಿಡ್ ಸೋಂಕಿತರ ಸಂಖ್ಯೆ 40 ಲಕ್ಷ ದಾಟಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ ಬೆನ್ನಲ್ಲೆ ಚಿದರಂಬರಂ ಅವರು ಕೇಂದ್ರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.</p>.<p>‘ಸೆ. 30ರೊಳಗೆ ಸೋಂಕಿತರ ಸಂಖ್ಯೆ 55 ಲಕ್ಷ ವಾಗುತ್ತದೆ ಎಂದು ನಾನು ಅಂದಾಜಿಸಿದ್ದೆ. ಆದರೆ ಅದು ತಪ್ಪು. ಭಾರತವು ಆ ಸಂಖ್ಯೆಯನ್ನು ಸೆ.20ರೊಳಗೆ ತಲುಪುವ ಸಾಧ್ಯತೆ ಇದ್ದು, ಈ ತಿಂಗಳಾಂತ್ಯದಲ್ಲಿ ಸೋಂಕಿತರ ಸಂಖ್ಯೆ 65 ಲಕ್ಷ ತಲುಪಲಿದೆ’ ಎಂದು ಅವರು ಅಂದಾಜು ಮಾಡಿದ್ದಾರೆ.</p>.<p>ಸೋಂಕು ಏರುತ್ತಿರುವುದನ್ನು ಗಮನಿಸಿದರೆ ದೇಶದಲ್ಲಿ ಲಾಕ್ಡೌನ್ ತಂತ್ರಗಳ ಲಾಭ ದೊರೆತಿಲ್ಲ ಎಂದು ಕೇಂದ್ರದ ಮಾಜಿ ಸಚಿವ ಆರೋಪಿಸಿದ್ದಾರೆ.</p>.<p>‘ನಾವು 21 ದಿನಗಳಲ್ಲಿ ಕೊರೊನಾ ವೈರಸ್ ಅನ್ನು ಸೋಲಿಸುತ್ತೇವೆ ಎಂದು ಭರವಸೆ ನೀಡಿದ್ದ ಪ್ರಧಾನಿ (ನರೇಂದ್ರ) ಮೋದಿ ಅವರು, ಈಗ ಉತ್ತರಿಸಬೇಕಿದೆ. ಈ ನಿಟ್ಟಿನಲ್ಲಿ ಇತರ ದೇಶಗಳು ಯಶಸ್ವಿಯಾದಂತೆ ತೋರಿದಾಗ ಭಾರತ ಏಕೆ ವಿಫಲವಾಯಿತು ಎಂಬುದನ್ನು ಅವರು ವಿವರಿಸಬೇಕು’ ಎಂದು ಚಿದಂಬರಂ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಕಾಂಗ್ರೆಸ್ ಹಿರಿಯ ಮುಖಂಡ ಪಿ. ಚಿದಂಬರಂ ಅವರು ಶನಿವಾರ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ‘ಲಾಕ್ಡೌನ್ ಕಾರ್ಯತಂತ್ರದ ಲಾಭ ಪಡೆಯದ ಏಕೈಕ ದೇಶ ಭಾರತವಾಗಿದೆ’ ಎಂದು ಟೀಕಿಸಿದ್ದಾರೆ.</p>.<p>ಅಲ್ಲದೆ, ಸೆಪ್ಟೆಂಬರ್ ಅಂತ್ಯದವೇಳೆಗೆ ಭಾರತದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 65 ಲಕ್ಷ ತಲುಪುವ ಸಾಧ್ಯತೆ ಇದೆ ಎಂದು ಅವರು ಅಂದಾಜಿಸಿದ್ದಾರೆ.</p>.<p>ದೇಶದಲ್ಲಿ ಶನಿವಾರ ಕೋವಿಡ್ ಸೋಂಕಿತರ ಸಂಖ್ಯೆ 40 ಲಕ್ಷ ದಾಟಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ ಬೆನ್ನಲ್ಲೆ ಚಿದರಂಬರಂ ಅವರು ಕೇಂದ್ರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.</p>.<p>‘ಸೆ. 30ರೊಳಗೆ ಸೋಂಕಿತರ ಸಂಖ್ಯೆ 55 ಲಕ್ಷ ವಾಗುತ್ತದೆ ಎಂದು ನಾನು ಅಂದಾಜಿಸಿದ್ದೆ. ಆದರೆ ಅದು ತಪ್ಪು. ಭಾರತವು ಆ ಸಂಖ್ಯೆಯನ್ನು ಸೆ.20ರೊಳಗೆ ತಲುಪುವ ಸಾಧ್ಯತೆ ಇದ್ದು, ಈ ತಿಂಗಳಾಂತ್ಯದಲ್ಲಿ ಸೋಂಕಿತರ ಸಂಖ್ಯೆ 65 ಲಕ್ಷ ತಲುಪಲಿದೆ’ ಎಂದು ಅವರು ಅಂದಾಜು ಮಾಡಿದ್ದಾರೆ.</p>.<p>ಸೋಂಕು ಏರುತ್ತಿರುವುದನ್ನು ಗಮನಿಸಿದರೆ ದೇಶದಲ್ಲಿ ಲಾಕ್ಡೌನ್ ತಂತ್ರಗಳ ಲಾಭ ದೊರೆತಿಲ್ಲ ಎಂದು ಕೇಂದ್ರದ ಮಾಜಿ ಸಚಿವ ಆರೋಪಿಸಿದ್ದಾರೆ.</p>.<p>‘ನಾವು 21 ದಿನಗಳಲ್ಲಿ ಕೊರೊನಾ ವೈರಸ್ ಅನ್ನು ಸೋಲಿಸುತ್ತೇವೆ ಎಂದು ಭರವಸೆ ನೀಡಿದ್ದ ಪ್ರಧಾನಿ (ನರೇಂದ್ರ) ಮೋದಿ ಅವರು, ಈಗ ಉತ್ತರಿಸಬೇಕಿದೆ. ಈ ನಿಟ್ಟಿನಲ್ಲಿ ಇತರ ದೇಶಗಳು ಯಶಸ್ವಿಯಾದಂತೆ ತೋರಿದಾಗ ಭಾರತ ಏಕೆ ವಿಫಲವಾಯಿತು ಎಂಬುದನ್ನು ಅವರು ವಿವರಿಸಬೇಕು’ ಎಂದು ಚಿದಂಬರಂ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>