‘ಕಾಯ್ದೆ ರದ್ದುಗೊಳಿಸಬೇಕೆಂಬ’ ನಿಲುವಿನಿಂದ ರೈತರು ಹಿಂದೆ ಸರಿಯದ ಕಾರಣ, ಪ್ರತಿಭಟನಾಕಾರರು ಮತ್ತು ಸರ್ಕಾರದ ನಡುವೆ ಗುರುವಾರ ನಡೆದ ನಾಲ್ಕನೇ ಸುತ್ತಿನ ಮಾತುಕತೆಯೂ ವಿಫಲಗೊಂಡಿದೆ. ಐದನೇ ಸುತ್ತಿನ ಮಾತುಕತೆ ಆರಂಭವಾಗುವ ಮುನ್ನ ಮಾತನಾಡಿದ ಎಐಕೆಎಸ್ ಸಂಘಟನೆಯ ವಿತ್ತ ಕಾರ್ಯದರ್ಶಿ ಕೃಷ್ಣಪ್ರಸಾದ್ ‘ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಕಾಯ್ದೆಗಳನ್ನು ರದ್ದುಪಡಿಸಿದರೆ ಮಾತ್ರ, ಪ್ರತಿಭಟನೆ ನಿಲ್ಲಿಸುತ್ತೇವೆ‘ ಎಂದು ಸ್ಪಷ್ಟಪಡಿಸಿದ್ದಾರೆ.