ಅಯೋಧ್ಯೆ: ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾಮಗಾರಿಯು ಸದ್ಯ ಆರಂಭವಾಗಿದ್ದು, 36–40 ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ‘ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತಿಳಿಸಿದೆ.
ಈ ಕುರಿತು ಟ್ರಸ್ಟ್ನ ಅಧಿಕೃತ ಟ್ವಿಟರ್ ಖಾತೆಯಿಂದ ಮಾಹಿತಿ ನೀಡಲಾಗಿದೆ. ‘ರಾಮ್ ಜನ್ಮಭೂಮಿ ಮಂದಿರ ನಿರ್ಮಾಣ ಪ್ರಾರಂಭವಾಗಿದೆ. ಉತ್ತರಾಖಂಡದ ರೂರ್ಕಿಯಲ್ಲಿರುವ ಕೇಂದ್ರ ಕಟ್ಟಡ ಅಧ್ಯಯನ ಸಂಸ್ಥೆ (ಸಿಬಿಆರ್ಐ), ಚೆನ್ನೈನ ಐಐಟಿ ಮತ್ತು ‘ಎಲ್ ಅ್ಯಂಡ್ಟಿ (ಲಾರ್ಸೆನ್ ಮತ್ತು ಟೌಬ್ರೊ)’ ಎಂಜಿನಿಯರ್ಗಳು ಮಂದಿರದ ಸ್ಥಳದಲ್ಲಿ ಮಣ್ಣು ಪರೀಕ್ಷೆಯಲ್ಲಿ ತೊಡಗಿದ್ದಾರೆ. ನಿರ್ಮಾಣ ಕಾರ್ಯವು 36-40 ತಿಂಗಳಲ್ಲಿ ಮುಗಿಯುವ ನಿರೀಕ್ಷೆಯಿದೆ,’ ಎಂದು ಟ್ವೀಟ್ ಮಾಡಲಾಗಿದೆ.
‘ಭಾರತದ ಪ್ರಾಚೀನ ಮತ್ತು ಸಾಂಪ್ರದಾಯಿಕ ಶೈಲಿಯನ್ನು ಅನುಸರಿಸಿ ಮಂದಿರದ ನಿರ್ಮಾಣ ಮಾಡಲಾಗುವುದು. ಭೂಕಂಪ, ಬಿರುಗಾಳಿಗಳು ಮತ್ತು ಇತರ ನೈಸರ್ಗಿಕ ವಿಕೋಪಗಳನ್ನು ತಾಳಿಕೊಳ್ಳುವಂತೆ ದೇಗುಲವನ್ನು ಕಟ್ಟಲಾಗುತ್ತಿದೆ. ಮಂದಿರ ನಿರ್ಮಾಣದಲ್ಲಿ ಕಬ್ಬಿಣವನ್ನು ಬಳಸದೇ ಇರಲು ನಿರ್ಧರಿಸಲಾಗಿದೆ,’ ಎಂದು ಟ್ರಸ್ಟ್ ತಿಳಿಸಿದೆ.
ಮತ್ತೊಂದೆಡೆ ಸುದ್ದಿ ಸಂಸ್ಥೆಗಳೊಂದಿಗೆ ಮಾತನಾಡಿರುವ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ, ವಿಶ್ವ ಹಿಂದೂ ಪರಿಷತ್ನ ಹಿರಿಯ ಕಾರ್ಯವಾಹಕ ಚಂಪತ್ ರಾಯ್, ‘ಅಯೋಧ್ಯೆ ರಾಮನ ದೇವಾಲಯ ನಿರ್ಮಿಸಲು ಕಲ್ಲುಗಳನ್ನು ಮಾತ್ರ ಬಳಸಲಾಗುತ್ತದೆ. ಈ ದೇಗುಲವು 1,000 ವರ್ಷಗಳಿಗೂ ಹೆಚ್ಚು ಕಾಲ ಏನೂ ಆಗದೇ ಉಳಿಯಲಿದೆ,’ ಎಂದು ಹೇಳಿದ್ದಾರೆ.
ದೇವಾಲಯದ ನಿರ್ಮಾಣದ ಉಸ್ತುವಾರಿಯನ್ನು ‘ಎಲ್ ಅ್ಯಂಡ್ ಟಿ’ ನೋಡಿಕೊಳ್ಳುತ್ತಿದೆ. ಚೆನ್ನೈ ಐಐಟಿಯು ಮಣ್ಣಿನ ಬಲವನ್ನು ಪರೀಕ್ಷಿಸುತ್ತಿದೆ. ಕಟ್ಟಡವು ಭೂಕಂಪ ನಿರೋಧಕವಾಗಲಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಸಿಬಿಆರ್ಐ ಸೇವೆ ಪಡೆದುಕೊಳ್ಳಲಾಗಿದೆ,’ ಎಂದು ಅವರು ತಿಳಿಸಿದ್ದಾರೆ.
‘ದೇವಾಲಯವನ್ನು ನಿರ್ಮಿಸಲು ಸುಮಾರು 10,000 ತಾಮ್ರದ ರಾಡ್ಗಳು ಬೇಕಾಗುತ್ತವೆ. ಜನರು ನಿರ್ಮಾಣ ಪ್ರಕ್ರಿಯೆಯ ಭಾಗವಾಗಲು ಬಯಸಿದರೆ, ಅವರು ತಾಮ್ರವನ್ನು ದಾನ ಮಾಡುವ ಮೂಲಕ ಪಾಲ್ಗೊಳ್ಳಬಹುದು. ಕೇವಲ ಕಲ್ಲುಗಳನ್ನು ಬಳಸಿ ದೇವಾಲಯವನ್ನು ನಿರ್ಮಿಸುತ್ತಿರುವುದರಿಂದ ಗಾಳಿ, ಬಿಸಿಲು, ನೀರಿನಿಂದ ಯಾವುದೇ ತೊಂದರೆಯಾಗುವುದಿಲ್ಲ. ಹೀಗಾಗಿ ದೇವಾಲಯವು ಕನಿಷ್ಠ 1,000 ವರ್ಷಗಳವರೆಗೆ ಇರುತ್ತದೆ,’ ಎಂದು ಚಂಪತ್ ರಾಯ್ ಅಭಿಪ್ರಾಯಪಟ್ಟಿದ್ದಾರೆ.
The construction of Shri Ram Janmbhoomi Mandir has begun. Engineers from CBRI Roorkee, IIT Madras along with L&T are now testing the soil at the mandir site. The construction work is expected to finish in 36-40 months.
— Shri Ram Janmbhoomi Teerth Kshetra (@ShriRamTeerth) August 20, 2020
The Mandir will be built by adhering to India's ancient and traditional construction techniques. It will also be built to sustain earthquakes, storms and other natural calamities. Iron won't be used in the construction of the Mandir.
— Shri Ram Janmbhoomi Teerth Kshetra (@ShriRamTeerth) August 20, 2020
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.