ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತ ಧರಣಿ ನಿಲ್ಲಿಸಲು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದೊಂದೇ ಮಾರ್ಗ: ಕಾಂಗ್ರೆಸ್

Last Updated 9 ಜೂನ್ 2021, 11:10 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರ ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯುವುದೊಂದೇ ರೈತರ ಪ್ರತಿಭಟನೆಯನ್ನು ಕೊನೆಗೊಳಿಸಲು ಇರುವ ಏಕೈಕ ಮಾರ್ಗ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ.

ಸರ್ಕಾರ ಮೊಂಡುತನವನ್ನು ಬಿಟ್ಟು ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಕಾಂಗ್ರೆಸ್ ಆಗ್ರಹಿಸಿದೆ.

‘ಕೃಷಿಭೂಮಿಯ ರಕ್ಷಣೆಗಾಗಿ 500ಕ್ಕೂ ಹೆಚ್ಚು ರೈತರು ಸಾವನ್ನಪಿದ್ದಾರೆ. ಆದರೆ, ಅವರು ಹೆದರುವುದಿಲ್ಲ’ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಟ್ವೀಟ್ ಮಾಡಿದ್ದಾರೆ.

ಕಳೆದ ಆರು ತಿಂಗಳಿನಿಂದ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಆಂದೋಲನಕ್ಕೆ ರಾಹುಲ್‌ ಗಾಂಧಿ ಬೆಂಬಲ ಸೂಚಿಸಿದ್ದಾರೆ.

‘ಪ್ರತಿಭಟನಾ ನಿರತ ರೈತರು ಭಿಕ್ಷೆ ಬೇಡುತ್ತಿಲ್ಲ. ಅವರ ಹಕ್ಕುಗಳನ್ನು ಕೇಳುತ್ತಿದ್ದಾರೆ. ಕೇಂದ್ರ ಸರ್ಕಾರ ಮೊಂಡುತನ ಬಿಟ್ಟು ರೈತರ ಬೇಡಿಕೆಗಳಿಗೆ ಸ್ಪಂದಿಸಬೇಕು’ ಎಂದು ಕಾಂಗ್ರೆಸ್ ವಕ್ತಾರ ರಣದೀಪ್‌ ಸುರ್ಜೇವಾಲ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT