ರಾಜ್ಯಸಭೆಯ ಇಂದಿನ ಕಾರ್ಯಕ್ರಮಪಟ್ಟಿಯನ್ನು ರದ್ದುಗೊಳಿಸಿ, ಕೃಷಿ ಕಾಯ್ದೆಗಳ ವಿರುದ್ಧ ಕಳೆದ ಎರಡು ತಿಂಗಳಿನಿಂದ ರೈತರು ನಡೆಸುತ್ತಿರುವ ಪ್ರತಿಭಟನೆ ಕುರಿತಾಗಿ ಚರ್ಚೆ ನಡೆಸಲು ಅವಕಾಶ ನೀಡಬೇಕು ಎಂದು ವಿರೋಧ ಪಕ್ಷಗಳು ಒತ್ತಾಯಿಸಿವೆ. ಆದರೆ ಸಭಾಧ್ಯಕ್ಷರಾದ ಎಂ.ವೆಂಕಯ್ಯನಾಯ್ಡು ಅವರು ಇದಕ್ಕೆ ಅನುಮತಿ ನೀಡಲಿಲ್ಲ.