<p><strong>ತಿರುವನಂತಪುರ: </strong>ಕೇರಳ ವಿಧಾನಸಭೆಯಲ್ಲಿ ಬಜೆಟ್ ಅಧಿವೇಶನದ ಮೊದಲ ದಿನವಾದ ಶುಕ್ರವಾರ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ಭಾಷಣದ ವೇಳೆ, ಸ್ಪೀಕರ್ ಪಿ. ಶ್ರೀರಾಮಕೃಷ್ಣನ್ ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ವಿರೋಧ ಪಕ್ಷಗಳ ಸದಸ್ಯರು ಬಳಿಕ ಸಭೆಯಿಂದ ಹೊರನಡೆದರು.</p>.<p>ಡಾಲರ್ ಕಳ್ಳಸಾಗಣೆ ಆರೋಪ ಎದುರಿಸುತ್ತಿರುವ ಸ್ಪೀಕರ್ ಪಿ. ಶ್ರೀರಾಮಕೃಷ್ಣನ್ ಅವರು ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷಗಳ ಸದಸ್ಯರು ಸದನದಲ್ಲಿಆಗ್ರಹಿಸಿ ಪ್ರತಿಭಟನೆ ನಡೆಸಿದರು.</p>.<p>ರಾಜ್ಯಪಾಲರು ಸರ್ಕಾರದ ಯೋಜನೆ ಕುರಿತಾಗಿ ಭಾಷಣ ಮಾಡಲು ಆರಂಭಿಸಿದಾಗ, ವಿರೋಧ ಪಕ್ಷದ ನಾಯಕರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಸ್ಪೀಕರ್ ವಿರುದ್ಧ ಘೋಷಣೆಗಳನ್ನು ಕೂಗಲು ಆರಂಭಿಸಿದರು.</p>.<p>‘ನಾನು ನನ್ನ ಸಾಂವಿಧಾನಿಕ ಕರ್ತವ್ಯವನ್ನು ನಿರ್ವಹಿಸುತ್ತಿದ್ದೇನೆ. ಈ ವೇಳೆ ಯಾರು ಅಡೆತಡೆಗಳನ್ನು ಉಂಟು ಮಾಡಬಾರದು. ಈಗಾಗಲೇ ನೀವು ಹಲವು ಬಾರಿ ಘೋಷಣೆಗಳನ್ನು ಕೂಗಿದ್ದೀರಿ. ಪದೇ ಪದೇ ನನ್ನನ್ನು ತಡೆಯಬೇಡಿ’ ಎಂದು ರಾಜ್ಯಪಾಲರು ಪ್ರತಿಪಕ್ಷಗಳಿಗೆ ಸೂಚಿಸಿದರು.</p>.<p>ಆದರೆ ಇದಕ್ಕೆ ಕಿವಿಗೊಡದ ವಿರೋಧ ಪಕ್ಷದ ನಾಯಕರು, ಸಭಾಂಗಣದಿಂದ ಹೊರ ನಡೆದು ಪ್ರತಿಭಟನೆ ಮುಂದುವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ: </strong>ಕೇರಳ ವಿಧಾನಸಭೆಯಲ್ಲಿ ಬಜೆಟ್ ಅಧಿವೇಶನದ ಮೊದಲ ದಿನವಾದ ಶುಕ್ರವಾರ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ಭಾಷಣದ ವೇಳೆ, ಸ್ಪೀಕರ್ ಪಿ. ಶ್ರೀರಾಮಕೃಷ್ಣನ್ ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ವಿರೋಧ ಪಕ್ಷಗಳ ಸದಸ್ಯರು ಬಳಿಕ ಸಭೆಯಿಂದ ಹೊರನಡೆದರು.</p>.<p>ಡಾಲರ್ ಕಳ್ಳಸಾಗಣೆ ಆರೋಪ ಎದುರಿಸುತ್ತಿರುವ ಸ್ಪೀಕರ್ ಪಿ. ಶ್ರೀರಾಮಕೃಷ್ಣನ್ ಅವರು ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷಗಳ ಸದಸ್ಯರು ಸದನದಲ್ಲಿಆಗ್ರಹಿಸಿ ಪ್ರತಿಭಟನೆ ನಡೆಸಿದರು.</p>.<p>ರಾಜ್ಯಪಾಲರು ಸರ್ಕಾರದ ಯೋಜನೆ ಕುರಿತಾಗಿ ಭಾಷಣ ಮಾಡಲು ಆರಂಭಿಸಿದಾಗ, ವಿರೋಧ ಪಕ್ಷದ ನಾಯಕರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಸ್ಪೀಕರ್ ವಿರುದ್ಧ ಘೋಷಣೆಗಳನ್ನು ಕೂಗಲು ಆರಂಭಿಸಿದರು.</p>.<p>‘ನಾನು ನನ್ನ ಸಾಂವಿಧಾನಿಕ ಕರ್ತವ್ಯವನ್ನು ನಿರ್ವಹಿಸುತ್ತಿದ್ದೇನೆ. ಈ ವೇಳೆ ಯಾರು ಅಡೆತಡೆಗಳನ್ನು ಉಂಟು ಮಾಡಬಾರದು. ಈಗಾಗಲೇ ನೀವು ಹಲವು ಬಾರಿ ಘೋಷಣೆಗಳನ್ನು ಕೂಗಿದ್ದೀರಿ. ಪದೇ ಪದೇ ನನ್ನನ್ನು ತಡೆಯಬೇಡಿ’ ಎಂದು ರಾಜ್ಯಪಾಲರು ಪ್ರತಿಪಕ್ಷಗಳಿಗೆ ಸೂಚಿಸಿದರು.</p>.<p>ಆದರೆ ಇದಕ್ಕೆ ಕಿವಿಗೊಡದ ವಿರೋಧ ಪಕ್ಷದ ನಾಯಕರು, ಸಭಾಂಗಣದಿಂದ ಹೊರ ನಡೆದು ಪ್ರತಿಭಟನೆ ಮುಂದುವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>