<p><strong>ನವದೆಹಲಿ:</strong> ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ, ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಸಂದರ್ಭದಲ್ಲಿ ರೈತರ ಸಾವಿನ ಬಗ್ಗೆ ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಆಗ್ರಹಿಸಿ, ಎಂಟು ವಿರೋಧ ಪಕ್ಷಗಳ ಮುಖಂಡರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಶುಕ್ರವಾರ ಪತ್ರ ಬರೆದಿದ್ದಾರೆ.</p>.<p>ಅಕಾಲಿ ದಳ, ಶಿವಸೇನಾ, ಬಿಎಸ್ಪಿ, ಎನ್ಸಿಪಿ, ಸಿಪಿಎಂ, ಸಿಪಿಐ, ಆರ್ಎಲ್ಪಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ನ ಮುಖಂಡರು, ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಶನಿವಾರ ಭೇಟಿ ಮಾಡಿ, ಕೃಷಿ ಕಾಯ್ದೆಗಳನ್ನು ಹಿಂದೆಗೆದುಕೊಳ್ಳುವಂತೆ ಆಗ್ರಹಿಸಲಿದ್ದಾರೆ.</p>.<p>ಪ್ರತಿಭಟನೆ ಸಂದರ್ಭದಲ್ಲಿ ರೈತರು ಮೃತಪಟ್ಟ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮಾಹಿತಿ ಇಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ತೋಮರ್ ಸಂಸತ್ತಿನಲ್ಲಿ ಹೇಳಿಕೆ ನೀಡಿದ್ದರು.</p>.<p>'ಕಿಸಾನ್ ಆಂದೋಲನದಲ್ಲಿ ನೂರಾರು ರೈತರು ಜೀವತೆತ್ತಿರುವ ಬಗ್ಗೆ ದಾಖಲೆಗಳಿದ್ದರೂ ಸಚಿವರ ಹೇಳಿಕೆಯು ದೇಶದ ರೈತರಿಗೆ ಅವಮಾನ ಮಾಡಿದೆ. ಸಚಿವ ತೋಮರ್, ರೈತರ ಕ್ಷಮೆ ಯಾಚಿಸಬೇಕು' ಎಂದುಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ, ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಸಂದರ್ಭದಲ್ಲಿ ರೈತರ ಸಾವಿನ ಬಗ್ಗೆ ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಆಗ್ರಹಿಸಿ, ಎಂಟು ವಿರೋಧ ಪಕ್ಷಗಳ ಮುಖಂಡರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಶುಕ್ರವಾರ ಪತ್ರ ಬರೆದಿದ್ದಾರೆ.</p>.<p>ಅಕಾಲಿ ದಳ, ಶಿವಸೇನಾ, ಬಿಎಸ್ಪಿ, ಎನ್ಸಿಪಿ, ಸಿಪಿಎಂ, ಸಿಪಿಐ, ಆರ್ಎಲ್ಪಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ನ ಮುಖಂಡರು, ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಶನಿವಾರ ಭೇಟಿ ಮಾಡಿ, ಕೃಷಿ ಕಾಯ್ದೆಗಳನ್ನು ಹಿಂದೆಗೆದುಕೊಳ್ಳುವಂತೆ ಆಗ್ರಹಿಸಲಿದ್ದಾರೆ.</p>.<p>ಪ್ರತಿಭಟನೆ ಸಂದರ್ಭದಲ್ಲಿ ರೈತರು ಮೃತಪಟ್ಟ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮಾಹಿತಿ ಇಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ತೋಮರ್ ಸಂಸತ್ತಿನಲ್ಲಿ ಹೇಳಿಕೆ ನೀಡಿದ್ದರು.</p>.<p>'ಕಿಸಾನ್ ಆಂದೋಲನದಲ್ಲಿ ನೂರಾರು ರೈತರು ಜೀವತೆತ್ತಿರುವ ಬಗ್ಗೆ ದಾಖಲೆಗಳಿದ್ದರೂ ಸಚಿವರ ಹೇಳಿಕೆಯು ದೇಶದ ರೈತರಿಗೆ ಅವಮಾನ ಮಾಡಿದೆ. ಸಚಿವ ತೋಮರ್, ರೈತರ ಕ್ಷಮೆ ಯಾಚಿಸಬೇಕು' ಎಂದುಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>