ಲೋಕಸಭೆಯಲ್ಲಿ ಕಾಂಗ್ರೆಸ್ನ ಇಬ್ಬರು ಸಂಸದರು ಕಾಗದಗಳನ್ನು ಹರಿದು, ಸ್ಪೀಕರ್ ಅವರ ಕುರ್ಚಿಯತ್ತ ತೂರಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಗದ್ದಲ ಮುಂದುವರಿಯಿತು. ಹೀಗಾಗಿ ಕಲಾಪವನ್ನು ಮಧ್ಯಾಹ್ನದವರೆಗೂ ಮುಂದೂಡಲಾಯಿತು. ಮಧ್ಯಾಹ್ನದ ನಂತರವೂ ಕಲಾಪ ನಡೆದದ್ದು ಕೇವಲ ಏಳು ನಿಮಿಷ. ರಾಜ್ಯಸಭೆಯಲ್ಲೂ ಪ್ರತಿಭಟನೆ ನಡೆದ ಕಾರಣ, ಕಲಾಪವನ್ನು ಮಧ್ಯಾಹ್ನದವರೆಗೆ ಮುಂದೂಡಲಾಗಿತ್ತು. ಮಧ್ಯಾಹ್ನವೂ ಯಾವುದೇ ಕಲಾಪ ನಡೆಯಲಿಲ್ಲ.