‘ಸಮವಸ್ತ್ರದಲ್ಲೇ ಇದ್ದ ಪೊಲೀಸರು, ಗಾಯಗೊಂಡು ರಸ್ತೆಯಲ್ಲಿ ಮಲಗಿದ್ದ ಯವಕರ ಮೇಲೆ ಹಲ್ಲೆ ನಡೆಸಿ, ರಾಷ್ಟ್ರಗೀತೆ ಹಾಡುವಂತೆ ಲಾಠಿಯಲ್ಲಿ ಹೊಡೆಯುತ್ತಿರುವ ವಿಡಿಯೊ, ಬಿಜೆಪಿ ನಾಯಕರ ದ್ವೇಷ ಭಾಷಣದ ಬಗ್ಗೆ ಪೊಲೀಸರ ನಿರ್ಲಕ್ಷ್ಯ ಸೇರಿದಂತೆಹಿಂಸಾಚಾರದಲ್ಲಿ ಪೊಲೀಸರೂ ಭಾಗಿಯಾಗಿರುವುದಕ್ಕೆ ಹಲವು ಸಾಕ್ಷಿಗಳಿವೆ. ಈ ಕುರಿತು ಹಾಲಿ ಅಥವಾ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಲು ಸರ್ಕಾರಕ್ಕೆ ಸೂಚಿಸಬೇಕು’ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.