<p><strong>ನವದೆಹಲಿ: </strong>ಸಂಸತ್ತಿನ ಉಭಯ ಸದನಗಳಲ್ಲಿ ಪೆಗಾಸಸ್ ಗೂಢಚರ್ಯೆ ಮತ್ತು ಕೃಷಿ ಕಾಯ್ದೆಗೆ ಸಂಬಂಧಿಸಿದ ವಿಚಾರಗಳನ್ನು ಚರ್ಚಿಸಲು ಸಂಬಂಧ ಜಂಟಿ ಕಾರ್ಯತಂತ್ರ ರೂಪಿಸಲು ಕಾಂಗ್ರೆಸ್, ಡಿಎಂಕೆ ಮತ್ತು ತೃಣಮೂಲ ಕಾಂಗ್ರೆಸ್ ಸೇರಿದಂತೆ ವಿವಿಧ ವಿರೋಧ ಪಕ್ಷಗಳ ನಾಯಕರು ಬುಧವಾರ ಸಭೆ ನಡೆಸಿದರು.</p>.<p>ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ಕಾಂಗ್ರೆಸ್ ಸೇರಿದಂತೆ 14 ವಿರೋಧ ಪಕ್ಷಗಳ ನಾಯಕರು ಭಾಗವಹಿಸಿದ್ದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೂ ಸಭೆಯಲ್ಲಿ ಪಾಲ್ಗೊಂಡಿದ್ದರು ಎಂದು ಮೂಲಗಳು ತಿಳಿಸಿವೆ.</p>.<p>ಸಭೆಯಲ್ಲಿ ಕಾಂಗ್ರೆಸ್ ಜೊತೆಗೆ ಡಿಎಂಕೆ, ಟಿಎಂಸಿ, ಎನ್ಸಿಪಿ, ಶಿವಸೇನಾ, ಎಸ್ಪಿ, ಸಿಪಿಎಂ, ಆರ್ಜೆಡಿ, ಎಎಪಿ, ಸಿಪಿಐ, ಎನ್ಸಿ, ಐಯುಎಂಎಲ್, ಎಲ್ಜೆಡಿ, ಆರ್ಎಸ್ಪಿ ಮತ್ತು ಕೆಸಿ (ಎಂ) ಪಕ್ಷದ ನಾಯಕರು ಹಾಜರಿದ್ದರು.</p>.<p>ಇದಕ್ಕೂ ಮುನ್ನ ಪಂಜಾಬ್ನ ಕಾಂಗ್ರೆಸ್ ಮತ್ತು ಅಕಾಲಿದಳದ ಸಂಸದರು ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ಧರಣಿ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಿಸುವುದಕ್ಕಾಗಿ ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಸಂಸತ್ತಿನ ಉಭಯ ಸದನಗಳಲ್ಲಿ ಪೆಗಾಸಸ್ ಗೂಢಚರ್ಯೆ ಮತ್ತು ಕೃಷಿ ಕಾಯ್ದೆಗೆ ಸಂಬಂಧಿಸಿದ ವಿಚಾರಗಳನ್ನು ಚರ್ಚಿಸಲು ಸಂಬಂಧ ಜಂಟಿ ಕಾರ್ಯತಂತ್ರ ರೂಪಿಸಲು ಕಾಂಗ್ರೆಸ್, ಡಿಎಂಕೆ ಮತ್ತು ತೃಣಮೂಲ ಕಾಂಗ್ರೆಸ್ ಸೇರಿದಂತೆ ವಿವಿಧ ವಿರೋಧ ಪಕ್ಷಗಳ ನಾಯಕರು ಬುಧವಾರ ಸಭೆ ನಡೆಸಿದರು.</p>.<p>ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ಕಾಂಗ್ರೆಸ್ ಸೇರಿದಂತೆ 14 ವಿರೋಧ ಪಕ್ಷಗಳ ನಾಯಕರು ಭಾಗವಹಿಸಿದ್ದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೂ ಸಭೆಯಲ್ಲಿ ಪಾಲ್ಗೊಂಡಿದ್ದರು ಎಂದು ಮೂಲಗಳು ತಿಳಿಸಿವೆ.</p>.<p>ಸಭೆಯಲ್ಲಿ ಕಾಂಗ್ರೆಸ್ ಜೊತೆಗೆ ಡಿಎಂಕೆ, ಟಿಎಂಸಿ, ಎನ್ಸಿಪಿ, ಶಿವಸೇನಾ, ಎಸ್ಪಿ, ಸಿಪಿಎಂ, ಆರ್ಜೆಡಿ, ಎಎಪಿ, ಸಿಪಿಐ, ಎನ್ಸಿ, ಐಯುಎಂಎಲ್, ಎಲ್ಜೆಡಿ, ಆರ್ಎಸ್ಪಿ ಮತ್ತು ಕೆಸಿ (ಎಂ) ಪಕ್ಷದ ನಾಯಕರು ಹಾಜರಿದ್ದರು.</p>.<p>ಇದಕ್ಕೂ ಮುನ್ನ ಪಂಜಾಬ್ನ ಕಾಂಗ್ರೆಸ್ ಮತ್ತು ಅಕಾಲಿದಳದ ಸಂಸದರು ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ಧರಣಿ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಿಸುವುದಕ್ಕಾಗಿ ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>