ಕೋವಿಡ್ ಎರಡನೇ ಅಲೆ ನಿರ್ವಹಣೆ, ಮೊದಲ ಅಲೆ ಸಂದರ್ಭದಲ್ಲಿ ವಲಸೆ ಕಾರ್ಮಿಕರ ಬಿಕ್ಕಟ್ಟು, ಆರ್ಥಿಕ ಸಮಸ್ಯೆಗಳು, ಕೃಷಿ ಕಾಯ್ದೆಗಳ ವಿರುದ್ಧ ರೈತರ ಪ್ರತಿಭಟನೆ ಮುಂತಾದವುಗಳಿಂದಾಗಿ ಕೇಂದ್ರ ಸರ್ಕಾರ ಮತ್ತು ಮೋದಿ ಅವರ ವರ್ಚಸ್ಸು ಕುಗ್ಗಿದೆ ಎಂಬ ಮಾತು ಬಿಜೆಪಿ ಒಳಗೇ ಕೇಳಿಬರುತ್ತಿದೆ. ಅಂತಹ ಸಂದರ್ಭದಲ್ಲಿಯೇ ‘ಸೇವೆ ಮತ್ತು ಸಮರ್ಪಣೆ ಅಭಿಯಾನ’ ನಡೆಸಲು ಬಿಜೆಪಿ ಮುಂದಾಗಿದೆ.