‘ಕೋವಿಡ್–19ನಿಂದಾಗಿ ಉಂಟಾಗಿರುವ ನಿರುದ್ಯೋಗ, ಹಣದುಬ್ಬರ ಸಮಸ್ಯೆಗಳಿಂದ ಈಗಾಗಲೇ ಜನರು ನೊಂದಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಅನಗತ್ಯವಾಗಿ ಪೆಟ್ರೋಲ್, ಡೀಸೆಲ್ ಮತ್ತು ಎಲ್ಪಿಜಿ ಬೆಲೆ ಏರಿಸುವುದು ಸರಿಯಲ್ಲ. ಜನರ ಕಲ್ಯಾಣಕ್ಕಾಗಿ ಈ ರೀತಿ ತೆರಿಗೆ ಸಂಗ್ರಹಿಸುವುದು ತಪ್ಪು’ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರು ಟ್ವೀಟ್ ಮಾಡಿದ್ದಾರೆ.