‘ಕಾಂಗ್ರೆಸ್ ಪಕ್ಷವು, ಮಾಯಾವತಿ ಅವರನ್ನು ಕಾಂಗ್ರೆಸ್ ಜೊತೆಗೆ ಸೇರಿ ಬಿಜೆಪಿ ವಿರುದ್ಧದ ಒಕ್ಕೂಟವನ್ನು ಮುನ್ನಡೆಸುವಂತೆ ಒತ್ತಾಯಿಸಿತ್ತು. ಆದರೆ, ಅದಕ್ಕೆ ಅವರು ಒಪ್ಪಲಿಲ್ಲ. ಕಾರಣಗಳೇನೇ ಇರಲಿ. ಆದರೆ, ಶನಿವಾರ ರಾಹುಲ್ ಗಾಂಧಿ ಅವರು ಈ ಕುರಿತು ತಮ್ಮ ಹೇಳಿಕೆಯನ್ನು ಪುನರಾವರ್ತಿಸಿದರಷ್ಟೇ’ ಎಂದೂ ಮಲ್ಲಿಕಾರ್ಜುನ ಖರ್ಗೆ ಸಮರ್ಥಿಸಿಕೊಂಡರು.