ಕಾಯ್ದೆಗಳ ಬಗ್ಗೆ ಸರ್ಕಾರದ ನಿಲುವನ್ನು ಪ್ರಧಾನಿ ಸ್ಪಷ್ಟಪಡಿಸುತ್ತಿದ್ದಂತೆಯೇ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ನಡೆಸಿದ್ದರು. ತಮ್ಮ ಭಾಷಣದ ವೇಳೆ ಕಾಂಗ್ರೆಸ್ ಅನ್ನೇ ಗುರಿಯಾಗಿಟ್ಟು ಮಾತನಾಡಿದ ಮೋದಿ, ‘ಕಾಂಗ್ರೆಸ್ ವಿಭಜಿತ ಮತ್ತು ಗೊಂದಲಕ್ಕೆ ಒಳಗಾಗಿರುವ ಪಕ್ಷ. ಕಾಯ್ದೆಗಳ ವಿಚಾರವಾಗಿ ರಾಜ್ಯಸಭೆಯಲ್ಲಿ ಒಂದು ನಿಲುವು, ಲೋಕಸಭೆಯಲ್ಲಿ ಇನ್ನೊಂದು ನಿಲುವನ್ನು ತಳೆದಿದೆ ಎಂದು ಹೇಳಿದರು.