ಸೋಮವಾರ, ಮಾರ್ಚ್ 27, 2023
32 °C

ಉಪರಾಷ್ಟ್ರಪತಿ ಚುನಾವಣೆ: ಅಭ್ಯರ್ಥಿ ಆಯ್ಕೆಗೆ ಇಂದು ವಿಪಕ್ಷ ನಾಯಕರ ಸಭೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ದೇಶದ ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿ ಘೋಷಣೆಯಾದ ಬೆನ್ನಲ್ಲೇ, ವಿಪಕ್ಷಗಳ ನಾಯಕರು ಅಭ್ಯರ್ಥಿ ಆಯ್ಕೆಗೆ ಇಂದು ಸಭೆ ಸೇರಲಿದ್ದಾರೆ.

ಸಂಸತ್‌ನ ಮಳೆಗಾಲದ ಅಧಿವೇಶನಕ್ಕೆ ಸಂಬಂಧಿಸಿ ಸರ್ಕಾರ ಸರ್ವಪಕ್ಷ ಸಭೆ ನಡೆಸಲಿದೆ. ಅದಾದ ಬಳಿಕ, ವಿಪಕ್ಷ ನಾಯಕರು ಒಟ್ಟಾಗಿ ಉಪರಾಷ್ಟ್ರಪತಿ ಚುನಾವಣೆ ಕುರಿತು ಚರ್ಚಿಸಲಿದ್ದಾರೆ.

ನಮ್ಮ ಪಕ್ಷದ ಕಡೆಯಿಂದ ಯಾವುದೇ ಆಭ್ಯರ್ಥಿ ಇರುವುದಿಲ್ಲ ಎಂದು ಕಾಂಗ್ರೆಸ್ ಈಗಾಗಲೇ ಸ್ಪಷ್ಟಪಡಿಸಿದೆ.

ಈ ಮೊದಲೇ ವಿಪಕ್ಷ ನಾಯಕರು ಸಭೆ ನಡೆಸಲು ನಿರ್ಧರಿಸಿದ್ದರಾದರೂ, ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಘೋಷಣೆಗೆ ಕಾದಿದ್ದರು.

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನಕರ್ ಅವರ ಹೆಸರು ಘೋಷಣೆಯಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಜಗದೀಪ್ ಧನಕರ್ ಹೆಸರು ಪ್ರಕಟಿಸಿದ್ದಾರೆ. ನಾಮಪತ್ರ ಸಲ್ಲಿಸಲು ಜುಲೈ 19 ಕೊನೆಯ ದಿನವಾಗಿದ್ದು, ಆಗಸ್ಟ್‌ 6 ರಂದು ಚುನಾವಣೆ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು